ರಾಜ್ಯ

ʼಕೈಗೆ ಮತ ಹಾಕದಿದ್ರೆ ಗ್ಯಾರಂಟಿ ಯೋಜನೆ ರದ್ದುʼ; ಬಾಲಕೃಷ್ಣ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

ಮಾಗಡಿ ಶಾಸಕ ಹೆಚ್‌ ಸಿ ಬಾಲಕೃಷ್ಣ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕದಿದ್ದರೆ, ಕಾಂಗ್ರೆಸ್‌ ಸೋತರೆ ಗ್ಯಾರಂಟಿ ಯೋಜನೆ ರದ್ದು ಎಂಬ ಹೇಳಿಕೆಯನ್ನು ನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಈ ಹೇಳಿಕೆ ಕುರಿತು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್‌ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷಗಳ ಕಾಲ ಮುಂದುವರಿಯಲಿವೆ. ಮಾಗಡಿ ಶಾಸಕ ಬಾಲಕೃಷ್ಣ ಎಚ್ಚರಿಕೆಯಿಂದಿರಿ ಎಂದಷ್ಟೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದು ಹೇಳಿಕೆ ನೀಡಿದರು.

ಬಾಲಕೃಷ್ಣ ಹೇಳಿದ್ದೇನು?

ಮಾಗಡಿ ತಾಲೂಕಿನ ಶ್ರೀಗಿರಿಪುರ ಜನಸಂಪರ್ಕ ಸಭೆಯಲ್ಲಿ ಸಂಸದ ಡಿಕೆ ಸುರೇಶ್‌ ಪರ ಮತ ನೀಡುವಂತೆ ತಾಕೀತು ಮಾಡಿದ ಬಾಲಕೃಷ್ಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತರೆ ಗ್ಯಾರಂಟಿ ರದ್ದು ಎಂದಿದ್ದರು. ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ, ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ಸಹ ಚರ್ಚೆ ಮಾಡಿದ್ದೇನೆ ಎಂದಿದ್ದರು.

ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗಳಿಗೋ ಎಂಬುದನ್ನು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಬಾಲಕೃಷ್ಣ ಹೇಳಿದ್ದರು.

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

6 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

14 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago