ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಲೋಕಸಭೆಯಲ್ಲಿ ಕಾಂಗ್ರೆಸ್ಗೆ ಮತ ಹಾಕದಿದ್ದರೆ, ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆ ರದ್ದು ಎಂಬ ಹೇಳಿಕೆಯನ್ನು ನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಈ ಹೇಳಿಕೆ ಕುರಿತು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷಗಳ ಕಾಲ ಮುಂದುವರಿಯಲಿವೆ. ಮಾಗಡಿ ಶಾಸಕ ಬಾಲಕೃಷ್ಣ ಎಚ್ಚರಿಕೆಯಿಂದಿರಿ ಎಂದಷ್ಟೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದು ಹೇಳಿಕೆ ನೀಡಿದರು.
ಬಾಲಕೃಷ್ಣ ಹೇಳಿದ್ದೇನು?
ಮಾಗಡಿ ತಾಲೂಕಿನ ಶ್ರೀಗಿರಿಪುರ ಜನಸಂಪರ್ಕ ಸಭೆಯಲ್ಲಿ ಸಂಸದ ಡಿಕೆ ಸುರೇಶ್ ಪರ ಮತ ನೀಡುವಂತೆ ತಾಕೀತು ಮಾಡಿದ ಬಾಲಕೃಷ್ಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ರದ್ದು ಎಂದಿದ್ದರು. ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ, ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ಸಹ ಚರ್ಚೆ ಮಾಡಿದ್ದೇನೆ ಎಂದಿದ್ದರು.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗಳಿಗೋ ಎಂಬುದನ್ನು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಬಾಲಕೃಷ್ಣ ಹೇಳಿದ್ದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…