ರಾಜ್ಯ

ಬಿಜೆಪಿ, ಧಾರ್ಮಿಕ ಆಚರಣೆಗಳನ್ನು ರಾಜಕೀಯಕ್ಕೆ ಬಳಸುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬಿಜೆಪಿ ಪಕ್ಷ ಧಾರ್ಮಿಕ ಆಚರಣೆ ಮತ್ತು ನಂಬಿಕೆಯನ್ನು ರಾಜಕೀಯಕ್ಕಾಗಿ ಹುಡುಕುತ್ತಿದ್ದು, ಅವುಗಳನ್ನು ತಮ್ಮ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಧರ್ಮ, ನಂಬಿಕೆ, ಶ್ರದ್ಧೆ ಮತ್ತು ಆಚರಣೆಗೆ ಸಂಬಂಧಿಸಿದ ವಿಚಾರಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿವೆ. ನಾವು ಪ್ರತಿಯೊಂದಕ್ಕೂ ಧರ್ಮಕ್ಕೆ ಗೌರವ ನೀಡಬೇಕು. ಆದರೆ ಬಿಜೆಪಿ ಪಕ್ಷ ಅವುಗಳನ್ನು ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಆರ್‌.ಅಶೋಕ್‌ ಅವರ ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳುವ ಕುರಿತಾದ ಟೀಕೆ ಬಗ್ಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಅಶೋಕ್‌ ಅವರ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ. ಅವರು ಟ್ವೀಟ್ ಆದರೂ ಮಾಡಲಿ, ಭಾಷಣವಾದರೂ ಮಾಡಲಿ ಅವರಿಗೆ ಉತ್ತರ ನೀಡಲು ನನಗೆ ಇಷ್ಟ ಇಲ್ಲ. ಕೆಲವರಿಗೆ ನನ್ನ ಹೆಸರು ಹೇಳದಿದ್ದರೆ ಮಾರ್ಕೆಟ್ ಇರುವುದಿಲ್ಲ. ನನ್ನ ಹೆಸರು ತೆಗೆದುಕೊಳ್ಳದಿದ್ದರೆ, ನಿದ್ದೆಯೂ ಬರುವುದಿಲ್ಲ, ಶಕ್ತಿಯೂ ಬರುವುದಿಲ್ಲ ಎಂದು ತಿರುಗೇಟು ನೀಡಿದರು.

ಯಾರು ಏನಾದರೂ ಹೇಳಿಕೊಳ್ಳಲಿ, ನಮ್ಮ ಧರ್ಮ, ನಮ್ಮ ಕರ್ಮ ಮತ್ತು ಆಚಾರ ವಿಚಾರ. ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ ಎಂದು ತಿಳಿಸಿದರು.

ಇನ್ನೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago