ಮಂಡ್ಯ: ರಾಜ್ಯದಲ್ಲಿಯೇ ನೀರಿಗೆ ಹಾಹಾಕಾರವಾಗಿದೆ. ಈಗಿರುವಾಗ ತಮಿಳುನಾಡಿಗೆ ನೀರು ಬಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ಯಾರೆಂಟಿ ಯೋಜನೆಗಳ ಬೃಹತ್ ಸಮಾವೇಶದ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ನಮ್ಮ ಜನರಿಗೆ ನೀರು ಕೊಡುವುದ ಕಷ್ಟವಾಗಿದೆ. ಆದರೆ ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆ ಹೇಳಿದರು.
ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ. ಮೇಕೆದಾಟು ಯೋಜನೆಗೆ ಬಿಜೆಪಿ ನಾಯಕರು ಮತ್ತು ಎಚ್.ಡಿ. ದೇವೇಗೌಡರು ಅನುಮತಿ ಪಡೆದು ಕಾವೇರಿ ವಿಚಾರವಾಗಿ ಮಾತನಾಡಲಿ ಎಂದರು.
ಬೆಂಗಳೂರಿನ ಕೊರತೆ ನೀಗಿಸಲು ಕೆಆರ್ಎಸ್ ಅಣೆಕಟ್ಟೆಯಿಂದ ನೀರು ಬಿಡಲಾಗುತ್ತಿದೆ. ತಮಿಳುನಾಡು ಸರ್ಕಾರದ ಒತ್ತಡಕ್ಕೆ ನಾವು ಎಂದಿಗೂ ಮಣಿಯಲಿಲ್ಲ. ರೈತರ ಹಿತದೃಷ್ಟಿಯಿಂದ ಕಾನೂನು ಹೋರಾಟ ಮುಂದುವರಿಸುತ್ತೇವೆ. ಮೇಕೆದಾಟು ಬಳಿ 66 ಟಿಎಂಸಿ ಅಡಿ ಬ್ಯಾಲೆನ್ಸಿಂಗ್ ಜಲಾಶಯ ನಿರ್ಮಿಸಲು ಬಿಜೆಪಿ ಅನುಮತಿ ನೀಡಿದರೆ, ತಮಿಳುನಾಡಿಗೆ ಬೇಡಿಕೆ ಬಂದಾಗಲೆಲ್ಲಾ ನೀರು ಬಿಡಲು ಸಾಧ್ಯವಾಗುತ್ತದೆ. ಆ ಮೂಲಕ ನೀರಿನ ಸಮಸ್ಯೆ ತಗ್ಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…