ರಾಜ್ಯ

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು: ಮಧು ಜಿ.ಮಾದೇಗೌಡ

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರಷ್ಟೇ ಡಿ.ಕೆ. ಶಿವಕುಮಾರ್ ಅವರೂ ಕಷ್ಟಪಟ್ಟಿದ್ದಾರೆ. ಎಲ್ಲ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಡಿಕೆ ಶಿವಕುಮಾರ್‌, ಅವರು ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಒತ್ತಾಯವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಅವರು ಹೇಳಿರುವುದನ್ನು ಕೇಳಿದ್ದೇನೆ. ಅವರ ಹೇಳಿಕೆ ಹಿಂದೆ ಏನು ಅಡಗಿದೆ ಎಂಬುದು ಗೊತ್ತಿಲ್ಲ. ಆದರೆ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಒತ್ತಾಯವಾಗಿದೆ ಎಂದು ಇದೇ ವೇಳೆ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರ ಕೆಲ ನಿರ್ಧಾರ ಹಾಗೂ ಬೇರೆ ಬೇರೆ ರೀತಿಯ ಹಲವು ವಿಚಾರಗಳಿಂದ ತಟಸ್ಥವಾಗುಳಿಯಲು ತೀರ್ಮಾನಿಸಿದ್ದೇನೆ. ಚುನಾವಣೆ ವಿಷಯವಾಗಿ ನಮ್ಮ ನಾಯಕರಾದ ಸಚಿವ ಎನ್. ಚಲುವರಾಯಸ್ವಾಮಿ ಅವರು ಇತ್ತೀಚೆಗೆ ನಡೆಸಿದ ಸಭೆಯಲ್ಲಿ ನಾನು ಭಾಗವಹಿಸಿ, ನಮ್ಮಲ್ಲೇ ಕೆಲ ಗೊಂದಲಗಳಿವೆ. ಅದನ್ನು ಬಗೆಹರಿಸಿ ಎಂದು ತಿಳಿಸಿದ್ದೇನೆ ಎಂದರು.

ಸುಮಲತಾ ಕಾಂಗ್ರೆಸ್‌ಗೆ ಬರುವುದು ಗೊತ್ತಿಲ್ಲ: ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದು ನನಗೆ ಗೊತ್ತಿಲ್ಲ, ನಾನೇ ಚುನಾವಣೆಯಲ್ಲಿ ತಟಸ್ಥವಾಗಿರುವುದರಿಂದ ಆ ಬಗ್ಗೆ ನಾನು ಹೇಳಲು ಇಚ್ಚಿಸುವುದಿಲ್ಲ. ತಟಸ್ಥಕ್ಕೆ ಕಾರಣ ಏನೆಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.

ನಾನು ಅಭ್ಯರ್ಥಿಯಲ್ಲ: ಲೋಕಸಭೆ ಚುನಾವಣೆಯ ಅಭ್ಯರ್ಥಿ ನಾನಲ್ಲ, ಸ್ಪರ್ಧಿಸುವುದಾಗಿ ನಾನು ಹೇಳಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಕೆಲ ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸುವಂತೆ ಜಿಲ್ಲಾ ನಾಯಕರು ಹಾಗೂ ವರಿಷ್ಠರಿಗೆ ತಿಳಿಸಿದ್ದೇನೆ ಎಂದರು.

ಅನಂತ ಕುಮಾರ್ ಹೆಗಡೆಗೆ ತಲೆ ಸರಿಯಿಲ್ಲ: ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ತಲೆ ಸರಿಯಿಲ್ಲ, ಕಳೆದ ಮೂರು ವರ್ಷಗಳಿಂದ ಮನೆಯಲ್ಲೇ ಇದ್ದರು. ಹಾಗಾಗಿ ಅವರು ಏನೇನೋ ಮಾತನಾಡುತ್ತಾರೆ. ಅದಕ್ಕೆಲ್ಲ ಪ್ರಾಮುಖ್ಯತೆ ಕೊಡಬಾರದು. ಚುನಾವಣೆ ಸಂದರ್ಭದಲ್ಲಿ ಹಿಂದೂ ಧರ್ಮ ಮತ್ತು ಶ್ರೀರಾಮನನ್ನು ಮುನ್ನಲೆಗೆ ತಂದು ಜನರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಅವರ ಚುನಾವಣಾ ಗಿಮಿಕ್ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ: ಪ್ರತಿಯೊಂದು ಚುನಾವಣೆಯಲ್ಲೂ ಬಿಜೆಪಿಯವರು ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಪುಲ್ವಾಮಾ ದಾಳಿಯಂತಹವುಗಳನ್ನು ಮಾಡಿ, ಜನರನ್ನು ದಿಕ್ಕು ತಪ್ಪಿಸುತ್ತಾರೆ. ನಮ್ಮೂರಲ್ಲೂ ಶ್ರೀರಾಮ ಮಂದಿರವಿದೆ, ನಾನೂ ಪೂಜೆ ಮಾಡುತ್ತೇನೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಇನ್ನೂ ಪೂರ್ಣಗೊಳ್ಳದಿದ್ದರೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉದ್ಘಾಟಿಸಿ, ಜನರ ಭಾವನೆಯನ್ನು ಹಿಡಿದಿಟ್ಟುಕೊಳ್ಳಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

andolanait

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

10 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

10 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

11 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

12 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

12 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

13 hours ago