ರಾಜ್ಯ

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು: ಮಧು ಜಿ.ಮಾದೇಗೌಡ

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರಷ್ಟೇ ಡಿ.ಕೆ. ಶಿವಕುಮಾರ್ ಅವರೂ ಕಷ್ಟಪಟ್ಟಿದ್ದಾರೆ. ಎಲ್ಲ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಡಿಕೆ ಶಿವಕುಮಾರ್‌, ಅವರು ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಒತ್ತಾಯವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಅವರು ಹೇಳಿರುವುದನ್ನು ಕೇಳಿದ್ದೇನೆ. ಅವರ ಹೇಳಿಕೆ ಹಿಂದೆ ಏನು ಅಡಗಿದೆ ಎಂಬುದು ಗೊತ್ತಿಲ್ಲ. ಆದರೆ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಒತ್ತಾಯವಾಗಿದೆ ಎಂದು ಇದೇ ವೇಳೆ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರ ಕೆಲ ನಿರ್ಧಾರ ಹಾಗೂ ಬೇರೆ ಬೇರೆ ರೀತಿಯ ಹಲವು ವಿಚಾರಗಳಿಂದ ತಟಸ್ಥವಾಗುಳಿಯಲು ತೀರ್ಮಾನಿಸಿದ್ದೇನೆ. ಚುನಾವಣೆ ವಿಷಯವಾಗಿ ನಮ್ಮ ನಾಯಕರಾದ ಸಚಿವ ಎನ್. ಚಲುವರಾಯಸ್ವಾಮಿ ಅವರು ಇತ್ತೀಚೆಗೆ ನಡೆಸಿದ ಸಭೆಯಲ್ಲಿ ನಾನು ಭಾಗವಹಿಸಿ, ನಮ್ಮಲ್ಲೇ ಕೆಲ ಗೊಂದಲಗಳಿವೆ. ಅದನ್ನು ಬಗೆಹರಿಸಿ ಎಂದು ತಿಳಿಸಿದ್ದೇನೆ ಎಂದರು.

ಸುಮಲತಾ ಕಾಂಗ್ರೆಸ್‌ಗೆ ಬರುವುದು ಗೊತ್ತಿಲ್ಲ: ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದು ನನಗೆ ಗೊತ್ತಿಲ್ಲ, ನಾನೇ ಚುನಾವಣೆಯಲ್ಲಿ ತಟಸ್ಥವಾಗಿರುವುದರಿಂದ ಆ ಬಗ್ಗೆ ನಾನು ಹೇಳಲು ಇಚ್ಚಿಸುವುದಿಲ್ಲ. ತಟಸ್ಥಕ್ಕೆ ಕಾರಣ ಏನೆಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.

ನಾನು ಅಭ್ಯರ್ಥಿಯಲ್ಲ: ಲೋಕಸಭೆ ಚುನಾವಣೆಯ ಅಭ್ಯರ್ಥಿ ನಾನಲ್ಲ, ಸ್ಪರ್ಧಿಸುವುದಾಗಿ ನಾನು ಹೇಳಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಕೆಲ ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸುವಂತೆ ಜಿಲ್ಲಾ ನಾಯಕರು ಹಾಗೂ ವರಿಷ್ಠರಿಗೆ ತಿಳಿಸಿದ್ದೇನೆ ಎಂದರು.

ಅನಂತ ಕುಮಾರ್ ಹೆಗಡೆಗೆ ತಲೆ ಸರಿಯಿಲ್ಲ: ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ತಲೆ ಸರಿಯಿಲ್ಲ, ಕಳೆದ ಮೂರು ವರ್ಷಗಳಿಂದ ಮನೆಯಲ್ಲೇ ಇದ್ದರು. ಹಾಗಾಗಿ ಅವರು ಏನೇನೋ ಮಾತನಾಡುತ್ತಾರೆ. ಅದಕ್ಕೆಲ್ಲ ಪ್ರಾಮುಖ್ಯತೆ ಕೊಡಬಾರದು. ಚುನಾವಣೆ ಸಂದರ್ಭದಲ್ಲಿ ಹಿಂದೂ ಧರ್ಮ ಮತ್ತು ಶ್ರೀರಾಮನನ್ನು ಮುನ್ನಲೆಗೆ ತಂದು ಜನರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಅವರ ಚುನಾವಣಾ ಗಿಮಿಕ್ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ: ಪ್ರತಿಯೊಂದು ಚುನಾವಣೆಯಲ್ಲೂ ಬಿಜೆಪಿಯವರು ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಪುಲ್ವಾಮಾ ದಾಳಿಯಂತಹವುಗಳನ್ನು ಮಾಡಿ, ಜನರನ್ನು ದಿಕ್ಕು ತಪ್ಪಿಸುತ್ತಾರೆ. ನಮ್ಮೂರಲ್ಲೂ ಶ್ರೀರಾಮ ಮಂದಿರವಿದೆ, ನಾನೂ ಪೂಜೆ ಮಾಡುತ್ತೇನೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಇನ್ನೂ ಪೂರ್ಣಗೊಳ್ಳದಿದ್ದರೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉದ್ಘಾಟಿಸಿ, ಜನರ ಭಾವನೆಯನ್ನು ಹಿಡಿದಿಟ್ಟುಕೊಳ್ಳಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

15 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

16 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

17 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

18 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

23 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

23 hours ago