ರಾಜ್ಯ

ಡಿಕೆಶಿ ಪವರ್‌ ಶೇರಿಂಗ್‌ ಸತ್ಯ ಬಹಿರಂಗಪಡಿಸಲಿ :ಆರ್.ಅಶೋಕ

ಬೆಂಗಳೂರು:  ರಾಜ್ಯ  ಕಾಂಗ್ರೆಸ್‌ ಸರ್ಕಾರದಲ್ಲಿ  ಸಿಎಂ  ಗಾದಿಗೆ ಕಿತ್ತಾಟ ಜಾಸ್ತಿ ಆಗಿದೆ. ಧೈರ್ಯ ಇದ್ದರೆ ಡಿ.ಕೆ.ಶಿವಕುಮಾರ್‌ ಪವರ್‌ ಶೇರಿಂಗ್‌ ಸತ್ಯ ಬಹಿರಂಗಪಡಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಸವಾಲು ಹಾಕಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ  ಸಿದ್ದರಾಮಯ್ಯ ರಾಜ್ಯದ ಅಭಿವೃದ್ದಿಯ ಬಗ್ಗೆ ಮಾತನಾಡುವುದು ಬಿಟ್ಟು ಸಿಎಂ ಕುರ್ಚಿ ಬಗ್ಗೆಯೇ ಮಾತನಾಡಿ, ಸಿಎಂ ಕುರ್ಚಿ ಖಾಲಿ ಇಲ್ಲವಲ್ಲ ಎಂದೇ ಹೇಳುತ್ತಿದ್ದಾರೆ. ಆದರೆ ಡಿಕೆಶಿ ಬಣ ಕುರ್ಚಿ ಖಾಲಿ ಮಾಡಿಸುವ ಬಗ್ಗೆಯೇ ಚಿಂತಿಸುತ್ತಿದೆ.  ಅಡಳಿತ ಮಾಡುವುದು ಬಿಟ್ಟು ಕಾಂಗ್ರೆಸ್‌ ಕುರ್ಚಿಗಾಗಿ ಪವರ್‌ ಪಾಲಿಟಿಕ್ಸ್‌ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಡಿಕೆಶಿ ಚುನಾವಣೆ ವೇಳೆ ನನ್ನ ಕೈಗೆ ಪೆನ್ನು ಕೊಡಿ ಎಂದು ಹೇಳುತ್ತಿದ್ದರು. ಈಗ ಎಂಎಲ್‌ಎಗಳ ಮುಂದೆ ಪೆನ್ನು ಅಂಗಲಾಚುವ ಸ್ಥಿತಿ ಬಂದಿದೆ. ಡಿಕೆಶಿಗೆ ಧೈರ್ಯವಿದ್ದರೆ ಪವರ್‌ ಶೇರಿಂಗ್‌ ಮಾತುಕತೆ ವೇಳೆ ಯಾರಿದ್ದರು ಎಂದು ಹೇಳಲಿ ಎಂದಿದ್ದಾರೆ.

ಸಚಿವ ರಾಜಣ್ಣ, ಪರಮೇಶ್ವರ್‌ ಎಲ್ಲರೂ ಡಿಕೆಶಿ ವಿರುದ್ಧ ಇದ್ದಾರೆ. ಆದರೆ ಮಾಗಡಿ ಶಾಸಕ ಬಾಲಕೃಷ್ಣ ಡಿಕೆಶಿನೆ ಮುಂದಿನ ಸಿಎಂ ಎನ್ನುತ್ತಾರೆ. ಕಾಂಗ್ರೆಸ್‌ನಲ್ಲಿ ಡಿಕೆಶಿಗೆ ಬೆಲೆಯೂ ಇಲ್ಲ, ರೈತರ ಬೆಳೆಗೆ ಪರಿಹಾರವೂ ಇಲ್ಲದಂತಾಗಿದೆ. ಒಳ್ಳೆಯ ಸರ್ಕಾರ ನೀಡುತ್ತೇವೆ ಎಂದು ರಾಜ್ಯದ ಜನತೆಗೆ ಭರವಸೆ ನೀಡಿದ್ದ ಕಾಂಗ್ರೆಸ್‌ ಆಭದ್ರ ಸರ್ಕಾರ ನೀಡಿ ಪ್ರತಿದಿನ ಕುರ್ಚಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಈಗಾಗಲೇ ಬೆಲೆ ಏರಿಕೆ ಜಾಸ್ತಿಯಾಗಿದೆ. ಬಜೆಟ್‌ನಲ್ಲಿ ಇನ್ನು ಏನೇನು ಕಾದಿದೆಯೋ. ಇದನ್ನೆಲ್ಲ ಸರಿ ಮಾಡದೇ ಇದ್ದರೆ, ದೇಶದಲ್ಲಿ ಜನತೆ ಕಾಂಗ್ರೆಸ್‌ ಓಡಿಸಿದ ಹಾಗೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಓಡಿಸುವ ಕಾಲ ಬರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

9 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

10 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

10 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

10 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

10 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

10 hours ago