ಬೆಂಗಳೂರು: ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಶ್ರೀಗಳು ರಾಜಕಾರಣ ಮಾಡುವವರಲ್ಲ, ಅವರಿಗೆ ಎಲ್ಲವೂ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಿಜೆಪಿ ಜೆಡಿಎಸ್ ನಾಯಕರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು.
ಸ್ವಾಮೀಜಿಯವರು ಬಂದವರಿಗೆಲ್ಲ ಹಾರ ಹಾಕಿ ಆರ್ಶೀವಾದ ಮಾಡಿ ಕಳುಹಿಸುತ್ತಾರೆ. ಏನೇ ಇರಲಿ ಸ್ವಾಮೀಜಿ ಬುದ್ಧಿವಂತರು, ಇತಿಹಾಸ ಅವರಿಗೆ ಗೊತ್ತಿದೆ. ಈ ಹಿಂದೆ ಒಕ್ಕಲಿಗ ಮಠವನ್ನು ಒಡೆದವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಒಕ್ಕಲಿಗರು ದಡ್ಡರಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಒಕ್ಕಲಿಗ ಮುಖ್ಯಮಂತ್ರಿಯನ್ನು ಅಧಿಕಾರದಿಂದ ಇಳಿಸಿದವರು ಜತೆ ಸೇರಿ ಒಕ್ಕಲಿಗ ಮಠಕ್ಕೆ ಭೇಟಿ ಕೊಟ್ಟು ಅವರಿಗೆ ಆರ್ಶಿವಾದ ಕೊಡಿಸಿರುವುದು ಕುಮಾರಸ್ವಾಮಿ ಅವರ ಅನುಕೂಲ ಸಿಂಧು ರಾಜಕಾರಣವನ್ನು ಜಗಜ್ಜಾಹೀರು ಮಾಡಿದೆ ಎಂದರು.
ಜೆಡಿಎಸ್ ನವರದ್ದು ಸಿದ್ದಾಂತ ರಾಜಕಾರಣವಲ್ಲ. ಅವರದು ಅನುಕೂಲ ರಾಜಕಾರಣ ಎಂದು ವ್ಯಂಗ್ಯವಾಡಿದರು. ಈ ಚುನಾವಣೆಯಲ್ಲಿ ಜೆಡಿಎಸ್ನ ಅಭ್ಯರ್ಥಿಗಳು ಸೋಲುತ್ತಾರೆ. ಹಾಗೆಯೇ ಬಿಜೆಪಿ ಟಿಕೆಟ್ ಮೇಲೆ ಚುನಾವಣಾ ಕಣಕ್ಕಿಳಿದಿರುವ ಜೆಡಿಎಸ್ ಕುಟುಂಬದ ಅಭ್ಯರ್ಥಿಯೂ ಸೋಲುತ್ತಾರೆ. ಜನ ದಡ್ಡರಲ್ಲ ಜನಕ್ಕೆ ಎಲ್ಲವೂ ಗೊತ್ತಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…