ಬೆಂಗಳೂರು: ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಶ್ರೀಗಳು ರಾಜಕಾರಣ ಮಾಡುವವರಲ್ಲ, ಅವರಿಗೆ ಎಲ್ಲವೂ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಿಜೆಪಿ ಜೆಡಿಎಸ್ ನಾಯಕರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು.
ಸ್ವಾಮೀಜಿಯವರು ಬಂದವರಿಗೆಲ್ಲ ಹಾರ ಹಾಕಿ ಆರ್ಶೀವಾದ ಮಾಡಿ ಕಳುಹಿಸುತ್ತಾರೆ. ಏನೇ ಇರಲಿ ಸ್ವಾಮೀಜಿ ಬುದ್ಧಿವಂತರು, ಇತಿಹಾಸ ಅವರಿಗೆ ಗೊತ್ತಿದೆ. ಈ ಹಿಂದೆ ಒಕ್ಕಲಿಗ ಮಠವನ್ನು ಒಡೆದವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಒಕ್ಕಲಿಗರು ದಡ್ಡರಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಒಕ್ಕಲಿಗ ಮುಖ್ಯಮಂತ್ರಿಯನ್ನು ಅಧಿಕಾರದಿಂದ ಇಳಿಸಿದವರು ಜತೆ ಸೇರಿ ಒಕ್ಕಲಿಗ ಮಠಕ್ಕೆ ಭೇಟಿ ಕೊಟ್ಟು ಅವರಿಗೆ ಆರ್ಶಿವಾದ ಕೊಡಿಸಿರುವುದು ಕುಮಾರಸ್ವಾಮಿ ಅವರ ಅನುಕೂಲ ಸಿಂಧು ರಾಜಕಾರಣವನ್ನು ಜಗಜ್ಜಾಹೀರು ಮಾಡಿದೆ ಎಂದರು.
ಜೆಡಿಎಸ್ ನವರದ್ದು ಸಿದ್ದಾಂತ ರಾಜಕಾರಣವಲ್ಲ. ಅವರದು ಅನುಕೂಲ ರಾಜಕಾರಣ ಎಂದು ವ್ಯಂಗ್ಯವಾಡಿದರು. ಈ ಚುನಾವಣೆಯಲ್ಲಿ ಜೆಡಿಎಸ್ನ ಅಭ್ಯರ್ಥಿಗಳು ಸೋಲುತ್ತಾರೆ. ಹಾಗೆಯೇ ಬಿಜೆಪಿ ಟಿಕೆಟ್ ಮೇಲೆ ಚುನಾವಣಾ ಕಣಕ್ಕಿಳಿದಿರುವ ಜೆಡಿಎಸ್ ಕುಟುಂಬದ ಅಭ್ಯರ್ಥಿಯೂ ಸೋಲುತ್ತಾರೆ. ಜನ ದಡ್ಡರಲ್ಲ ಜನಕ್ಕೆ ಎಲ್ಲವೂ ಗೊತ್ತಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…