ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ತಪ್ಪು ಮಾಡಿರುವುದು ನಾನಲ್ಲ ಅವರು. ಕಳೆದ ಕೆಲ ದಿನಗಳಿಂದ ನನ್ನನ್ನು ಗುಣಗಾನ ಮಾಡುತ್ತಿದ್ದಾರೆ. ಜನಾಂದೋಲನದಲ್ಲಿ ರಾಜ್ಯದ ಜನತೆ ಏನೆಲ್ಲಾ ಕಷ್ಟ ಪಡುತ್ತಿದ್ದಾರೆ ಎಂಬುದನ್ನು ಕುರಿತು ಚರ್ಚೆ ಮಾಡುವುದನ್ನು ಬಿಟ್ಟು ನನ್ನ ಬಗ್ಗೆ ಗುಣಗಾನ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ನನ್ನ ಕುಟುಂಬದ ಆಸ್ತಿ ದಾಖಲೆ ಬಗ್ಗೆ ಡಿಕೆಶಿ ಮಾತಾಡಿದ್ದಾರೆ. ಮಾಹಿತಿ ಬಿಚ್ಚಿಡುತ್ತೇನೆ ಎಂದೂ ಸಹ ಹೇಳಿದ್ದಾರೆ. ನನ್ನ ಬಗ್ಗೆ ಏನು ಬಿಚ್ಚಿಡುತ್ತಾರೋ ಬಿಚ್ಚಿಡಲಿ ಎಂದು ಸವಾಲು ಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಾವಿಗೀಡಾದ ಪಿಎಸ್ಐ ಪರಶುರಾಮ್ ಪತ್ನಿ ಗೋಳು ಅಷ್ಟಿಷ್ಟಲ್ಲ. ಆದರೆ ಮೃತ ಪಿಎಸ್ಐ ಪತ್ನಿಗೆ ಸರ್ಕಾರದಿಂದ ನ್ಯಾಯ ಕೊಡಿಸಲು ಇಲ್ಲಿಯವರೆಗೂ ಸಾಧ್ಯವಾಗಿಲ್ಲ. ಮೊದಲು ಆಕೆಗೆ ನ್ಯಾಯ ಕೊಡಿಸುವ ಕೆಲಸ ಆಗಬೇಕು. ಪರಶುರಾಮ್ ಸಾವಿನ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…