ಬೆಂಗಳೂರು: ನನಗೆ ಧರ್ಮ ಹಾಗೂ ದೇವರ ಮೇಲೆ ನಂಬಿಕೆಯಿದ್ದು, ನಾನು ಮನಸ್ಸಿನ ನೆಮ್ಮದಿ, ರಕ್ಷಣೆ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ಅದರಲ್ಲಿ ಯಾವುದೇ ವಿಶೇಷವಿಲ್ಲ, ಪ್ರತಿನಿತ್ಯವೂ ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದ ಮಲ್ಲೇಶ್ವರಂನ ವೆಂಕಟೇಶ್ವರ ದೇವಾಲಯದಲ್ಲಿ ಇಂದು(ಜನವರಿ.10) ವೈಕುಂಠ ಏಕಾದಶಿಯ ಪ್ರಯುಕ್ತ ದೇವರ ದರ್ಶನ ಪಡೆದ ನಂತರ ಪ್ರತ್ಯಾಂಗಿರಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪೂಜೆ ಮಾಡಬಾರದಾ? ನಾನು ದೇವರಲ್ಲಿ ನಂಬಿಕೆಯಿಟ್ಟಿರುವ ವ್ಯಕ್ತಿ. ನನಗೆ ನಮ್ಮ ದೇವರು, ಧರ್ಮ ಹಾಗೂ ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ನಮ್ಮ ಮನೆಯಲ್ಲಿ ನಾನು ಪ್ರತಿದಿನ ಮನೆಯಲ್ಲಿ ದೇವರ ಪೂಜೆ ಮಾಡುತ್ತೇನೆ. ಅದರಲ್ಲಿ ಯಾವುದೇ ವಿಶೇಷವಿಲ್ಲ, ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಡುವುದೇ ಇಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆ ಅದರ ಮೇಲೆ ಪ್ರೀತಿ ಮತ್ತು ಭಕ್ತಿಯಿದ್ದೇ ಇರುತ್ತದೆ ಎಂದು ಹೇಳಿದ್ದಾರೆ.
ಈ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗಳ ಬಗ್ಗೆ ಮಾತನಾಡಿದ ಅವರು, ನಾನು ಪ್ರತ್ಯಾಂಗಿರಾ ದೇವಿಗೆ ಪೂಜೆ ಸಲ್ಲಿಸಿದ್ದು, ನನಗೆ ಯಾರಾದರೂ ತೊಂದರೆ ಕೊಡುತ್ತಾರೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥಿಸಿದ್ದೇನೆ. ಧರ್ಮೋ ರಕ್ಷತಿ ರಕ್ಷತಃ ಎಂಬ ಶ್ಲೋಕದಂತೆ, ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವೂ ಉಳಿಸುತ್ತದೆ ಎನ್ನುವುದನ್ನು ನಂಬುವವನು ನಾನು. ಹೀಗಾಗಿ ಅದರಲ್ಲಿ ಯಾವುದೇ ರಹಸ್ಯವಿಲ್ಲ ಎಂದಿದ್ದಾರೆ.
ಇನ್ನೂ ನೀವು (ಮಾಧ್ಯಮ) ಕೂಡ ನಮಗೆ ತೊಂದರೆ ಕೊಡುತ್ತೀರಾ. ಇಲ್ಲದೇ ಇರುವ ಹೊಸ ವಿವಾದಗಳನ್ನು ಸೃಷ್ಠಿಸುತ್ತೀರಾ ಆದ್ದರಿಂದ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥಿಸುತ್ತಿರುತ್ತೇನೆ. ವೈಕುಂಠ ಏಕಾದಶಿಯಂದು ರಾಜ್ಯದ ಎಲ್ಲಾ ಕಡೆ ಜನರು ವೆಂಕಟೇಶ್ವರನ ದರ್ಶನ ಮಾಡುತ್ತಿದ್ದಾರೆ. ಹಾಗಾಗಿ ವೆಂಕಟೇಶ್ವರನ ಜೊತೆ ಲಕ್ಷ್ಮೀ ಸೇರಿದಂತೆ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…