Mysore
21
broken clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

ಮಂಜುನಾಥ್‌ರನ್ನು ಹುದ್ದೆಯಿಂದ ಕೆಳಗಿಳಿಸಲು ಪ್ರಯತ್ನಿಸಿದ್ದ ಡಿಕೆಶಿ: ಹೆಚ್‌ ಡಿ ದೇವೇಗೌಡ ಆರೋಪ

ರಾಮನಗರ: ಡಾ.ಮಂಜುನಾಥ್‌ರನ್ನು ಜಯದೇವ ಡೈರೆಕ್ಟರ್‌ ಹುದ್ದೆಯಿಂದ ತೆಗೆಸಲು ಡಿಕೆ ಶಿವಕುಮಾರ್ ಪ್ರಯತ್ನ ಮಾಡಿದ್ದರು. ಈ ಬಗ್ಗೆ ಎಸ್‌ಎಂ ಕೃಷ್ಣಗೆ ಚೀಟಿ ಕೊಟ್ಟಿದ್ದರು ಎಂದು ಹೆಚ್‌ಡಿ ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಕನಕಪುರದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆಯಲ್ಲಿ ಮಾತನಾಡಿದ ಅವರು ಇಡೀ ವಿಶ್ವದಲ್ಲೇ 2 ಸಾವಿರ ಬೆಡ್‌ಗಳನ್ನು ಹೊಂದಿರುವ ಹೃದಯ ಸಂಬಂಧಿ ಆಸ್ಪತ್ರೆ ಇಲ್ಲ, ಅಂತಹ ಆಸ್ಪತ್ರೆ ಮಾಡಿದ್ದು ಡಾ.ಮಂಜುನಾಥ್‌. ಇದನ್ನ ಮನಗಂಡು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. 8 ಲಕ್ಷ ಜನರಿಗೆ ಉಚಿತ ಚಿಕಿತ್ಸೆ ಕೊಟ್ಟ ಮಂಜುನಾಥ್‌ರನ್ನು ನಮಗೆ ಕೊಡಿ, ಅವರ ಸೇವೆ ದೇಶಕ್ಕೆ ಬೇಕು ಎಂದ್ರು ಮೋದಿ ಅವರು ಎಂದು ದೇವೇಗೌಡ ಹೇಳಿದರು.

ಡಾ.ಮಂಜುನಾಥ್ ಒಬ್ಬ ಪ್ರಾಮಾಣಿಕ ವೈದ್ಯ. ದಯಮಾಡಿ ಡಾ.ಮಂಜುನಾಥ್ ಅವರನ್ನ ಗೆಲ್ಲಿಸಿಕೊಂಡು ಬನ್ನಿ. ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ ಎಂದು ಮನವಿ ಮಾಡಿದರು. ಕಾಂಗ್ರೆಸ್​ನವರು ಮೂರು ಜನ ಡಾ.ಮಂಜುನಾಥ್ ಎಂಬುವವರನ್ನ ನಿಲ್ಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!