ರಾಜ್ಯ

ಮಂಜುನಾಥ್‌ರನ್ನು ಹುದ್ದೆಯಿಂದ ಕೆಳಗಿಳಿಸಲು ಪ್ರಯತ್ನಿಸಿದ್ದ ಡಿಕೆಶಿ: ಹೆಚ್‌ ಡಿ ದೇವೇಗೌಡ ಆರೋಪ

ರಾಮನಗರ: ಡಾ.ಮಂಜುನಾಥ್‌ರನ್ನು ಜಯದೇವ ಡೈರೆಕ್ಟರ್‌ ಹುದ್ದೆಯಿಂದ ತೆಗೆಸಲು ಡಿಕೆ ಶಿವಕುಮಾರ್ ಪ್ರಯತ್ನ ಮಾಡಿದ್ದರು. ಈ ಬಗ್ಗೆ ಎಸ್‌ಎಂ ಕೃಷ್ಣಗೆ ಚೀಟಿ ಕೊಟ್ಟಿದ್ದರು ಎಂದು ಹೆಚ್‌ಡಿ ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಕನಕಪುರದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆಯಲ್ಲಿ ಮಾತನಾಡಿದ ಅವರು ಇಡೀ ವಿಶ್ವದಲ್ಲೇ 2 ಸಾವಿರ ಬೆಡ್‌ಗಳನ್ನು ಹೊಂದಿರುವ ಹೃದಯ ಸಂಬಂಧಿ ಆಸ್ಪತ್ರೆ ಇಲ್ಲ, ಅಂತಹ ಆಸ್ಪತ್ರೆ ಮಾಡಿದ್ದು ಡಾ.ಮಂಜುನಾಥ್‌. ಇದನ್ನ ಮನಗಂಡು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. 8 ಲಕ್ಷ ಜನರಿಗೆ ಉಚಿತ ಚಿಕಿತ್ಸೆ ಕೊಟ್ಟ ಮಂಜುನಾಥ್‌ರನ್ನು ನಮಗೆ ಕೊಡಿ, ಅವರ ಸೇವೆ ದೇಶಕ್ಕೆ ಬೇಕು ಎಂದ್ರು ಮೋದಿ ಅವರು ಎಂದು ದೇವೇಗೌಡ ಹೇಳಿದರು.

ಡಾ.ಮಂಜುನಾಥ್ ಒಬ್ಬ ಪ್ರಾಮಾಣಿಕ ವೈದ್ಯ. ದಯಮಾಡಿ ಡಾ.ಮಂಜುನಾಥ್ ಅವರನ್ನ ಗೆಲ್ಲಿಸಿಕೊಂಡು ಬನ್ನಿ. ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ ಎಂದು ಮನವಿ ಮಾಡಿದರು. ಕಾಂಗ್ರೆಸ್​ನವರು ಮೂರು ಜನ ಡಾ.ಮಂಜುನಾಥ್ ಎಂಬುವವರನ್ನ ನಿಲ್ಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

12 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

12 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

13 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

14 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

15 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

16 hours ago