ರಾಜ್ಯ

ಕುಮಾರಸ್ವಾಮಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ; ಡಿಕೆಶಿ ಕಿಡಿ

ವಿಜಯಪುರ : ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ. ಅವರು ಮೆಂಟಲ್ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಟಿ ರನ್ಯಾರಾವ್ ದುಬೈನಿಂದ ಚಿನ್ನ ತರುತ್ತಿರುವ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದ್ದೇ ಕಾಂಗ್ರೆಸ್‍ನ ಮಹಾನಾಯಕ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಇದಕ್ಕೆ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇರೆ ಜಿಲ್ಲೆಯಿಂದ ಬಂದವರು, ನಾವು ಬೆಂಗಳೂರಿನವರು, ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗಿದೆ, ಇದರಿಂದ ಅವರಿಗಾಗಿರುವ ತೊಂದರೆಯೇನು? ರಾಮನಗರವನ್ನು ಬದಲಾವಣೆ ಮಾಡುತ್ತಿಲ್ಲ. ರಾಮನಗರ ರಾಮನಗರವಾಗಿಯೇ ಉಳಿಯುತ್ತದೆ. ಕುಮಾರಸ್ವಾಮಿಯವರೇಕೆ ಹಾಸನ ಜಿಲ್ಲೆಯಿಂದ ಇಲ್ಲಿಗೆ ಬಂದರು. ಹಾಸನದಲ್ಲೇ ರಾಜಕಾರಣ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಮೊದಲು ಹೆಸರು ಬದಲಾವಣೆ ಮಾಡಿಕೊಳ್ಳಲಿ. ಅವರ ಹೆಸರ ಮುಂದಿರುವ ಊರಿನ ಇನ್ಶಿಲ್ ಅನ್ನು ಬದಲಾವಣೆ ಮಾಡಿಕೊಳ್ಳಲಿ. ಈಗಲೂ ಅವರು ಎಚ್‍ಡಿ ಎಂದು ಇಟ್ಟುಕೊಂಡಿರುವುದೇಕೆ? ಎಂದರು.

ಮದ್ರಾಸ್‍ಗೆ ಚೆನ್ನೈ ಎಂದು ಗುಲ್ಬರ್ಗವನ್ನು ಕಲಬುರಗಿ ಎಂದು ಬಿಜಾಪುರವನ್ನು ವಿಜಯಪುರ ಎಂದು ಬದಲಾವಣೆ ಮಾಡಲಾಗಿದೆ. ಇದರಿಂದ ಅವರಿಗಾಗುವ ತೊಂದರೆಯೇನು ಎಂದು ಪ್ರಶ್ನಿಸಿದರು.

ರಿಯಲ್ ಎಸ್ಟೇಟ್ ಅಭಿವೃದ್ಧಿಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೌದು. ರೈತರ, ಹಳ್ಳಿಜನಗಳ ಅಭಿವೃದ್ಧಿಯಾಗಬೇಕು. ನಮ್ಮ ಆಸ್ತಿಗಳ ಬೆಲೆ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ವಿದೇಶಗಳಿಂದ ಬಂದು ಬಂಡವಾಳ ಹೂಡಿಕೆ ಮಾಡಬೇಕು. ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಸೆ ಎಂದರು.

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ನಾನು 25 ಲಕ್ಷ ರೂ. ನೀಡಿದ್ದೇನೆ. ನಮ ಟ್ರ‌ಸ್ಟ್‌ ನಿಂದ 2.50 ಕೋಟಿ ರೂ. ನೀಡಿದ್ದೇವೆ. ನಾವೇನು ಕದ್ದು ಕೊಟ್ಟಿಲ್ಲ. ಸಂಪಾದನೆ ಮಾಡಿದ ಆಸ್ತಿಯಲ್ಲಿ ರಾಜಾರೋಷವಾಗಿ ನಮ್ಮ ಪಕ್ಷ ನಡೆಸುವ ಪತ್ರಿಕೆಗೆ ಕೊಟ್ಟಿದ್ದೇವೆ. ಇದರಲ್ಲಿ ತಪ್ಪೇನು ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago