ರಾಜ್ಯ

ಕುಮಾರಸ್ವಾಮಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ; ಡಿಕೆಶಿ ಕಿಡಿ

ವಿಜಯಪುರ : ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ. ಅವರು ಮೆಂಟಲ್ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಟಿ ರನ್ಯಾರಾವ್ ದುಬೈನಿಂದ ಚಿನ್ನ ತರುತ್ತಿರುವ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದ್ದೇ ಕಾಂಗ್ರೆಸ್‍ನ ಮಹಾನಾಯಕ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಇದಕ್ಕೆ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇರೆ ಜಿಲ್ಲೆಯಿಂದ ಬಂದವರು, ನಾವು ಬೆಂಗಳೂರಿನವರು, ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗಿದೆ, ಇದರಿಂದ ಅವರಿಗಾಗಿರುವ ತೊಂದರೆಯೇನು? ರಾಮನಗರವನ್ನು ಬದಲಾವಣೆ ಮಾಡುತ್ತಿಲ್ಲ. ರಾಮನಗರ ರಾಮನಗರವಾಗಿಯೇ ಉಳಿಯುತ್ತದೆ. ಕುಮಾರಸ್ವಾಮಿಯವರೇಕೆ ಹಾಸನ ಜಿಲ್ಲೆಯಿಂದ ಇಲ್ಲಿಗೆ ಬಂದರು. ಹಾಸನದಲ್ಲೇ ರಾಜಕಾರಣ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಮೊದಲು ಹೆಸರು ಬದಲಾವಣೆ ಮಾಡಿಕೊಳ್ಳಲಿ. ಅವರ ಹೆಸರ ಮುಂದಿರುವ ಊರಿನ ಇನ್ಶಿಲ್ ಅನ್ನು ಬದಲಾವಣೆ ಮಾಡಿಕೊಳ್ಳಲಿ. ಈಗಲೂ ಅವರು ಎಚ್‍ಡಿ ಎಂದು ಇಟ್ಟುಕೊಂಡಿರುವುದೇಕೆ? ಎಂದರು.

ಮದ್ರಾಸ್‍ಗೆ ಚೆನ್ನೈ ಎಂದು ಗುಲ್ಬರ್ಗವನ್ನು ಕಲಬುರಗಿ ಎಂದು ಬಿಜಾಪುರವನ್ನು ವಿಜಯಪುರ ಎಂದು ಬದಲಾವಣೆ ಮಾಡಲಾಗಿದೆ. ಇದರಿಂದ ಅವರಿಗಾಗುವ ತೊಂದರೆಯೇನು ಎಂದು ಪ್ರಶ್ನಿಸಿದರು.

ರಿಯಲ್ ಎಸ್ಟೇಟ್ ಅಭಿವೃದ್ಧಿಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೌದು. ರೈತರ, ಹಳ್ಳಿಜನಗಳ ಅಭಿವೃದ್ಧಿಯಾಗಬೇಕು. ನಮ್ಮ ಆಸ್ತಿಗಳ ಬೆಲೆ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ವಿದೇಶಗಳಿಂದ ಬಂದು ಬಂಡವಾಳ ಹೂಡಿಕೆ ಮಾಡಬೇಕು. ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಸೆ ಎಂದರು.

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ನಾನು 25 ಲಕ್ಷ ರೂ. ನೀಡಿದ್ದೇನೆ. ನಮ ಟ್ರ‌ಸ್ಟ್‌ ನಿಂದ 2.50 ಕೋಟಿ ರೂ. ನೀಡಿದ್ದೇವೆ. ನಾವೇನು ಕದ್ದು ಕೊಟ್ಟಿಲ್ಲ. ಸಂಪಾದನೆ ಮಾಡಿದ ಆಸ್ತಿಯಲ್ಲಿ ರಾಜಾರೋಷವಾಗಿ ನಮ್ಮ ಪಕ್ಷ ನಡೆಸುವ ಪತ್ರಿಕೆಗೆ ಕೊಟ್ಟಿದ್ದೇವೆ. ಇದರಲ್ಲಿ ತಪ್ಪೇನು ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

3 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

6 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

6 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

6 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

6 hours ago