dkshi and hdk
ವಿಜಯಪುರ : ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ. ಅವರು ಮೆಂಟಲ್ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಟಿ ರನ್ಯಾರಾವ್ ದುಬೈನಿಂದ ಚಿನ್ನ ತರುತ್ತಿರುವ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದ್ದೇ ಕಾಂಗ್ರೆಸ್ನ ಮಹಾನಾಯಕ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಇದಕ್ಕೆ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇರೆ ಜಿಲ್ಲೆಯಿಂದ ಬಂದವರು, ನಾವು ಬೆಂಗಳೂರಿನವರು, ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗಿದೆ, ಇದರಿಂದ ಅವರಿಗಾಗಿರುವ ತೊಂದರೆಯೇನು? ರಾಮನಗರವನ್ನು ಬದಲಾವಣೆ ಮಾಡುತ್ತಿಲ್ಲ. ರಾಮನಗರ ರಾಮನಗರವಾಗಿಯೇ ಉಳಿಯುತ್ತದೆ. ಕುಮಾರಸ್ವಾಮಿಯವರೇಕೆ ಹಾಸನ ಜಿಲ್ಲೆಯಿಂದ ಇಲ್ಲಿಗೆ ಬಂದರು. ಹಾಸನದಲ್ಲೇ ರಾಜಕಾರಣ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಮೊದಲು ಹೆಸರು ಬದಲಾವಣೆ ಮಾಡಿಕೊಳ್ಳಲಿ. ಅವರ ಹೆಸರ ಮುಂದಿರುವ ಊರಿನ ಇನ್ಶಿಲ್ ಅನ್ನು ಬದಲಾವಣೆ ಮಾಡಿಕೊಳ್ಳಲಿ. ಈಗಲೂ ಅವರು ಎಚ್ಡಿ ಎಂದು ಇಟ್ಟುಕೊಂಡಿರುವುದೇಕೆ? ಎಂದರು.
ಮದ್ರಾಸ್ಗೆ ಚೆನ್ನೈ ಎಂದು ಗುಲ್ಬರ್ಗವನ್ನು ಕಲಬುರಗಿ ಎಂದು ಬಿಜಾಪುರವನ್ನು ವಿಜಯಪುರ ಎಂದು ಬದಲಾವಣೆ ಮಾಡಲಾಗಿದೆ. ಇದರಿಂದ ಅವರಿಗಾಗುವ ತೊಂದರೆಯೇನು ಎಂದು ಪ್ರಶ್ನಿಸಿದರು.
ರಿಯಲ್ ಎಸ್ಟೇಟ್ ಅಭಿವೃದ್ಧಿಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೌದು. ರೈತರ, ಹಳ್ಳಿಜನಗಳ ಅಭಿವೃದ್ಧಿಯಾಗಬೇಕು. ನಮ್ಮ ಆಸ್ತಿಗಳ ಬೆಲೆ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ವಿದೇಶಗಳಿಂದ ಬಂದು ಬಂಡವಾಳ ಹೂಡಿಕೆ ಮಾಡಬೇಕು. ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಸೆ ಎಂದರು.
ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ನಾನು 25 ಲಕ್ಷ ರೂ. ನೀಡಿದ್ದೇನೆ. ನಮ ಟ್ರಸ್ಟ್ ನಿಂದ 2.50 ಕೋಟಿ ರೂ. ನೀಡಿದ್ದೇವೆ. ನಾವೇನು ಕದ್ದು ಕೊಟ್ಟಿಲ್ಲ. ಸಂಪಾದನೆ ಮಾಡಿದ ಆಸ್ತಿಯಲ್ಲಿ ರಾಜಾರೋಷವಾಗಿ ನಮ್ಮ ಪಕ್ಷ ನಡೆಸುವ ಪತ್ರಿಕೆಗೆ ಕೊಟ್ಟಿದ್ದೇವೆ. ಇದರಲ್ಲಿ ತಪ್ಪೇನು ಎಂದು ಸಮರ್ಥಿಸಿಕೊಂಡರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…