ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್ ಅವರು ಸಾಕಷ್ಟು ದುಡಿದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಹಾಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 9 ಸ್ಥಾನ ಗೆಲ್ಲುವುದಕ್ಕೆ ಡಿಕೆ ಶಿವಕುಮಾರ್ ಅವರ ಶ್ರಮ ಸಾಕಷ್ಟಿದೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.
ಈ ಡಿಸೆಂಬರ್ನಿಂದ ಮುಂದಿನ 5 ವರ್ಷ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿರುತ್ತಾರೆ. ಅಂದರೆ, ಏಲೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.
ಸಚಿವ ಕೆಎನ್ ರಾಜಣ್ಣ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…