ರಾಜ್ಯ

ಕಾಲ್ತುಳಿತ ಪ್ರಕರಣ : ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಿಷ್ಟು

ಬೆಂಗಳೂರು : ಅಭಿಮಾನಿ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್‌ ಕಂಟ್ರೊಲ್ಡ್‌ ಕ್ರೌಡ್‌ ಆಯ್ತು. ಹೀಗಾಗಿ ತೆರೆದ ವಾಹನದಲ್ಲಿ ವಿಜಯೋತ್ಸವ ಮೆರವಣಿಗೆ ರದ್ದು ಮಾಡಿದ್ದೆವು. ಪರಿಸ್ಥಿತಿ ಬಗ್ಗೆ ಬೆಳಿಗ್ಗೆನೆ ಗಮನಿಸಿದ್ದೇವು. ಅದಕ್ಕೆ ನಾವು ಮೆರವಣಿಗೆಯನ್ನು ರದ್ದು ಮಾಡಿ, ಕ್ಲೋಸ್‌ ವಾಹನದಲ್ಲಿ ಆಟಗಾರರನು ಕರೆತಂದೆವು ಎಂದು ವಿವರಿಸಿದರು.

ನಾವು ಅನೇಕ ಸಿದ್ಧತೆ ಮಾಡಿಕೊಂಡಿದ್ದೇವು. ಆದರೂ, ಹೀಗಾಗಿದೆ. ಆಸ್ಪತ್ರೆಗೆ ಹೋಗಿ ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.

ಇನ್ನೂ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಡಿಕೆಶಿ, ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು
ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

2 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

3 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

3 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

3 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

3 hours ago