ರಾಜ್ಯ

ಡಿಕೆಶಿ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ: ಎಂ.ಬಿ ಪಾಟೀಲ್‌

ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ.

ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆಗಾಗಿ ಕೊಯಮತ್ತೂರಿನ ಇಶಾ ಕೇಂದ್ರಕ್ಕೆ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಡಿಕೆ ಶಿವಕುಮಾರ್‌ ಹಿಂದೂ ಅಲ್ವಾ. ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ ಪಕ್ಷದಲ್ಲ. ನನ್ನ ವೈಯುಕ್ತಿಕ ವಿಚಾರ ಪಕ್ಷದಲ್ಲ. ಪಕ್ಷ ವಿಚಾರ ನನ್ನ ವೈಯುಕ್ತಿಕ ಅಲ್ಲ. ಹೀಗಾಗಿ ಒಂದಕ್ಕೊಂದು ಮಿಕ್ಸ್‌ ಮಾಡುವ ಅವಶ್ಯಕತೆ ಇಲ್ಲ ಎಂದು ಸಮರ್ಥಿಸಿಕೊಂಡರು.

ಅಮಿತ್‌ ಶಾ ಅವರ ಜೊತೆಯಲ್ಲಿ ಡಿಕೆ ಶಿವಕುಮಾರ್‌ ಅವರು ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿ ಆದರೆ ಏನು ತಪ್ಪಿದೆ. ಅದು ವೈಯುಕ್ತಿಕ ವಿಚಾರ. ಅನೇಕ ಕಾರ್ಯಕ್ರಮಗಳಲ್ಲಿ ನಮ್ಮನ್ನು ಕರೆದಿರುತ್ತಾರೆ, ಅವರನ್ನು ಕರೆದಿರುತ್ತಾರೆ ಎಂದರು.

ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಬಾರದು ಎಂದು ತೀರ್ಮಾನಿಸಿದ್ದೇನೆ. ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್‌ ನಿಧನ

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್‌ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ…

38 mins ago

ಹಾಸನ: ಸತತ ನಾಲ್ಕು ಗಂಟೆಗಳ ನಂತರ ಸೆರೆಯಾದ ಒಂಟಿಸಲಗ: ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ…

1 hour ago

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ…

1 hour ago

ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

2 hours ago

ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಾದ್ಯಂತ ವರ್ಷದ ಮೊದಲ ವರ್ಷಧಾರೆ

ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು…

3 hours ago

ಹನೂರಿನಲ್ಲಿ ಮುಂದುವರಿದ ಕಾಡಾನೆಗಳ ಉಪಟಳ: ಸೋಲಾರ್‌ ಬೇಲಿಯನ್ನೇ ನಾಶ ಮಾಡಿದ ಆನೆಗಳು

ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ…

3 hours ago