ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್ ಶಿವರಾತ್ರಿ ಆಚರಣೆಗಾಗಿ ಕೊಯಮತ್ತೂರಿನ ಇಶಾ ಕೇಂದ್ರಕ್ಕೆ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಡಿಕೆ ಶಿವಕುಮಾರ್ ಹಿಂದೂ ಅಲ್ವಾ. ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ ಪಕ್ಷದಲ್ಲ. ನನ್ನ ವೈಯುಕ್ತಿಕ ವಿಚಾರ ಪಕ್ಷದಲ್ಲ. ಪಕ್ಷ ವಿಚಾರ ನನ್ನ ವೈಯುಕ್ತಿಕ ಅಲ್ಲ. ಹೀಗಾಗಿ ಒಂದಕ್ಕೊಂದು ಮಿಕ್ಸ್ ಮಾಡುವ ಅವಶ್ಯಕತೆ ಇಲ್ಲ ಎಂದು ಸಮರ್ಥಿಸಿಕೊಂಡರು.
ಅಮಿತ್ ಶಾ ಅವರ ಜೊತೆಯಲ್ಲಿ ಡಿಕೆ ಶಿವಕುಮಾರ್ ಅವರು ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿ ಆದರೆ ಏನು ತಪ್ಪಿದೆ. ಅದು ವೈಯುಕ್ತಿಕ ವಿಚಾರ. ಅನೇಕ ಕಾರ್ಯಕ್ರಮಗಳಲ್ಲಿ ನಮ್ಮನ್ನು ಕರೆದಿರುತ್ತಾರೆ, ಅವರನ್ನು ಕರೆದಿರುತ್ತಾರೆ ಎಂದರು.
ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಬಾರದು ಎಂದು ತೀರ್ಮಾನಿಸಿದ್ದೇನೆ. ಈ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ತಿಳಿಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…