DK Shivakumar
ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ ಮುಕ್ತಿ ಸಿಗಲಿ, ಅದು ಸತ್ಯನಾ ಅಥವಾ ಸುಳ್ಳಾ ಅನ್ನೋದು ಜನಕ್ಕೆ ಗೊತ್ತಾಗಲಿ ಎಂದು ಎಸ್ಐಟಿ ರಚನೆ ಮಾಡಿದ್ದೇವೆ. ಅದರಲ್ಲಿ ಈಗ ಏನು ಸಿಕ್ಕಿಲ್ಲ ಎಂದು ಗೊತ್ತಾದ ಮೇಲೆ ಬಿಜೆಪಿಗರು ಧರ್ಮಸ್ಥಳದ ಪರವಾಗಿ ರ್ಯಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಷ್ಟು ದಿನ ರ್ಯಾಲಿ ಯಾಕೆ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದ ಅವರು, ಎಸ್ಐಟಿ ರಚನೆ ಆದಾಗ ಯಾಕೆ ಅವರು ಮಾತಾಡಲಿಲ್ಲ. ಈಗ ರಾಜಕೀಯ ಮಾಡೋಕೆ ಬಂದಿದ್ದಾರೆ. ಇದು ಧರ್ಮಸ್ಥಳ ಪರ ರ್ಯಾಲಿ ಅನ್ನೋದಕ್ಕಿಂತ ಬಿಜೆಪಿಯ ರಾಜಕೀಯ ರ್ಯಾಲಿ ಎನ್ನಬಹುದು ಎಂದು ಟೀಕೆ ಮಾಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…