ರಾಜ್ಯ

ಇವಿಎಂ ಹ್ಯಾಕ್‌ ಬಗ್ಗೆ ಮಾಸ್ಕ್‌ ಹೇಳಿಕೆ ಬೆಂಬಲಿಸಿದ ಡಿಸಿಎಂ ಡಿಕೆ ಶಿವಕುಮಾರ್‌

ಮೈಸೂರು: ವಿಶ್ವದ ಶ್ರೇಷ್ಠ ತಂತ್ರಜ್ಞಾನ ನಿಪುಣ ಟೆಸ್ಲಾ ಕಂಪೆನಿ ಒಡೆಯ ಎಲಾನ್‌ ಮಸ್ಕ್‌ ಅವರು ಇತ್ತೀಚೆಗೆ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾದ ಇವಿಎಂ ಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿದ್ದರು.

ಇದಕ್ಕೆ ದೇಶಾದ್ಯಂತ ಹಲವಾರು ಟೀಕೆಗಳು, ಪರ-ವಿರೋಧಗಳು ವ್ಯಕ್ತವಾಗಿದ್ದವು. ರಾಷ್ಟ್ರೀಯ ಚುನಾವಣಾ ಆಯೋಗವು ಸಹಾ ಎಲಾನ್‌ ಮಸ್ಕ್‌ ಅವರಿಗೆ ಬಹಿರಂಗ ಸವಾಲು ಹಾಕಿತ್ತು. ಇನ್ನು ಎಲಾನ್‌ ಮಸ್ಕ್‌ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬೆಂಬಲಿಸದ್ದರು. ಈಗ ಅವರ ಸಾಲಿಗೆ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸೇರಿದ್ದು, ಎಲಾನ್‌ ಮಸ್ಕ್‌ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರು, ವಿಶ್ವದ ಶ್ರೇಷ್ಠ ತಂತ್ರಜ್ಞಾನ ನಿಪುಣನೆ ಭಾರತದ ಚುನಾವಣೆಯಲ್ಲಿ ಬಳಸಿರುವ ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದರೆ ಇದು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸುತ್ತದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಡಿಕೆ ಟ್ವೀಟ್‌ನಲ್ಲೇನಿದೆ? : ಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

59 mins ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

1 hour ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

1 hour ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

2 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

2 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

2 hours ago