ಮೈಸೂರು: ವಿಶ್ವದ ಶ್ರೇಷ್ಠ ತಂತ್ರಜ್ಞಾನ ನಿಪುಣ ಟೆಸ್ಲಾ ಕಂಪೆನಿ ಒಡೆಯ ಎಲಾನ್ ಮಸ್ಕ್ ಅವರು ಇತ್ತೀಚೆಗೆ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾದ ಇವಿಎಂ ಗಳನ್ನು ಹ್ಯಾಕ್ ಮಾಡಬಹುದು ಎಂದು ಹೇಳಿದ್ದರು.
ಇದಕ್ಕೆ ದೇಶಾದ್ಯಂತ ಹಲವಾರು ಟೀಕೆಗಳು, ಪರ-ವಿರೋಧಗಳು ವ್ಯಕ್ತವಾಗಿದ್ದವು. ರಾಷ್ಟ್ರೀಯ ಚುನಾವಣಾ ಆಯೋಗವು ಸಹಾ ಎಲಾನ್ ಮಸ್ಕ್ ಅವರಿಗೆ ಬಹಿರಂಗ ಸವಾಲು ಹಾಕಿತ್ತು. ಇನ್ನು ಎಲಾನ್ ಮಸ್ಕ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಬಲಿಸದ್ದರು. ಈಗ ಅವರ ಸಾಲಿಗೆ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೇರಿದ್ದು, ಎಲಾನ್ ಮಸ್ಕ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ವಿಶ್ವದ ಶ್ರೇಷ್ಠ ತಂತ್ರಜ್ಞಾನ ನಿಪುಣನೆ ಭಾರತದ ಚುನಾವಣೆಯಲ್ಲಿ ಬಳಸಿರುವ ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದರೆ ಇದು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸುತ್ತದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಡಿಕೆ ಟ್ವೀಟ್ನಲ್ಲೇನಿದೆ? : ಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್ ಮಸ್ಕ್ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…