ಖಾಸಗಿ ಚಾನೆಲ್ ನಡೆಸಿದ ಸಂದರ್ಶನವೊಂದರಲ್ಲಿ ʼರಾಮನನ್ನು ದೇವರು ಅಂತ ಹೇಳಿ ನಮ್ಮ ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಪೂಜೆ ಮಾಡುವುದಿಲ್ಲ. ನೀವು ಹಳ್ಳಿಗಳಲ್ಲಿ ಹೋಗಿ ನೋಡಿ. ಮನೆಗಳಲ್ಲಿ ಕೆಲವರು ಫೋಟೊಗಳನ್ನು ಸಹ ಇಡುವುದಿಲ್ಲʼ ಎಂದು ಡಿಕೆ ಸುರೇಶ್ ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ವಿಡಿಯೊ ತುಣುಕನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ಆರ್ ಅಶೋಕ್ ʼದಕ್ಷಿಣ ಭಾರತದಲ್ಲಿ ಯಾರೂ ರಾಮನನ್ನ ಪೂಜಿಸುವುದಿಲ್ಲವಂತೆ. ಡಿಕೆ ಸುರೇಶ್ ಅವರ ನುಡಿಮುತ್ತುಗಳನ್ನ ಒಮ್ಮೆ ಕೇಳಿಸಿಕೊಳ್ಳಿ. ಅವರ ದೇಶ ವಿಭಜನೆಯ ಮಾತು ಬಾಯಿ ತಪ್ಪಿ ಬಂದಿದ್ದಲ್ಲ. ಅದರ ಹಿಂದೆ ಬಹಳ ದೊಡ್ಡ ಮಸಲತ್ತು ಇದೆ. ಹಿಂದೂ ಧರ್ಮ ಒಡೆದರೆ ಮಾತ್ರ ದೇಶ ಒಡೆಯಲು ಸಾಧ್ಯ ಅಂತ ಬ್ರಿಟಿಷರಿಂದ, ಮೊಘಲರಿಂದ, ಟಿಪ್ಪುವಿನಿಂದ ಚೆನ್ನಾಗಿ ಕಲಿತಿರುವ ಕಾಂಗ್ರೆಸ್ ನಾಯಕರು, ಅದನ್ನ ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆʼ ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ಎಕ್ಸ್ನಲ್ಲಿಯೇ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್ ʼಇಂದಿಗೂ ನಮ್ಮ ಹಳ್ಳಿಯ ಜನ ತಮ್ಮ ಜಾನಪದ ಪರಂಪರೆಯ ಮಾರಮ್ಮ, ಚೌಡಮ್ಮ, ಹುಲಿಗೆಮ್ಮ, ಯಲ್ಲಮ್ಮ, ಕಬ್ಬಾಳಮ್ಮ, ಮದ್ದೂರಮ್ಮ, ಮಾದಪ್ಪ, ಮುನೇಶ್ವರ, ಸಿದ್ದೇಶ್ವರ, ಭೂತ, ವರ್ತೆ, ಪಂಜುರ್ಲಿ ದೈವಗಳನ್ನೇ ತಮ್ಮ ಮನೆದೇವರಾಗಿ ಆರಾಧಿಸಿಕೊಂಡು ಬಂದವರು. ನಮ್ಮದು ಮೂಲ ದ್ರಾವಿಡ ಪರಂಪರೆ. ನಮ್ಮ ಹಳ್ಳಿಯ ಜನರ ಮನೆಗಳಲ್ಲಿ ಸಿಗುವುದು ನಮ್ಮ ಪರಂಪರೆಯ ದೈವಗಳು ನನ್ನ ಮಾತಿನ ಅರ್ಥವನ್ನು ತಿರುಚಿ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುವುದು, ಜನರನ್ನು ಭಾವನಾತ್ಮಕವಾಗಿ ಕೆಣಕುವುದು ಬಿಜೆಪಿ ಪಕ್ಷದ ಹಳಸಲು ಸಿದ್ಧಾಂತ. ಅಭಿವೃದ್ಧಿ, ಸಿದ್ಧಾಂತದ ಅಡಿಯಲ್ಲಿ ನಮ್ಮನ್ನು ಎದುರಿಸಲಾಗದ ನಿಮಗೆ ಸಿಗುವುದು ಇಂತವೇ ಪುರಾವೆಗಳು. ಜನ ದಡ್ಡರಲ್ಲ. ಈ ಚುನಾವಣೆ ನಿಮಗೆ ತಕ್ಕ ಪಾಠ ಕಲಿಸಲಿದೆ! ನೆನಪಿರಲಿ’ ಎಂದು ಟ್ವೀಟ್ ಮಾಡಿದ್ದಾರೆ.
ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…
ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತಾ…
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…
ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…