ರಾಜ್ಯ

ರಾಮನನ್ನು ದಕ್ಷಿಣ ಭಾರತದಲ್ಲಿ ಪೂಜಿಸಲ್ಲ; ಸ್ಪಷ್ಟನೆ ನೀಡಿದ ಡಿಕೆಸು

ಖಾಸಗಿ ಚಾನೆಲ್‌ ನಡೆಸಿದ ಸಂದರ್ಶನವೊಂದರಲ್ಲಿ ʼರಾಮನನ್ನು ದೇವರು ಅಂತ ಹೇಳಿ ನಮ್ಮ ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಪೂಜೆ ಮಾಡುವುದಿಲ್ಲ. ನೀವು ಹಳ್ಳಿಗಳಲ್ಲಿ ಹೋಗಿ ನೋಡಿ. ಮನೆಗಳಲ್ಲಿ ಕೆಲವರು ಫೋಟೊಗಳನ್ನು ಸಹ ಇಡುವುದಿಲ್ಲʼ ಎಂದು ಡಿಕೆ ಸುರೇಶ್‌ ಹೇಳಿಕೆ ನೀಡಿದ್ದರು.

ಈ ಹೇಳಿಕೆಯ ವಿಡಿಯೊ ತುಣುಕನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಆರ್‌ ಅಶೋಕ್‌ ʼದಕ್ಷಿಣ ಭಾರತದಲ್ಲಿ ಯಾರೂ ರಾಮನನ್ನ ಪೂಜಿಸುವುದಿಲ್ಲವಂತೆ. ಡಿಕೆ ಸುರೇಶ್ ಅವರ ನುಡಿಮುತ್ತುಗಳನ್ನ ಒಮ್ಮೆ ಕೇಳಿಸಿಕೊಳ್ಳಿ. ಅವರ ದೇಶ ವಿಭಜನೆಯ ಮಾತು ಬಾಯಿ ತಪ್ಪಿ ಬಂದಿದ್ದಲ್ಲ. ಅದರ ಹಿಂದೆ ಬಹಳ ದೊಡ್ಡ ಮಸಲತ್ತು ಇದೆ. ಹಿಂದೂ ಧರ್ಮ ಒಡೆದರೆ ಮಾತ್ರ ದೇಶ ಒಡೆಯಲು ಸಾಧ್ಯ ಅಂತ ಬ್ರಿಟಿಷರಿಂದ, ಮೊಘಲರಿಂದ, ಟಿಪ್ಪುವಿನಿಂದ ಚೆನ್ನಾಗಿ ಕಲಿತಿರುವ ಕಾಂಗ್ರೆಸ್ ನಾಯಕರು, ಅದನ್ನ ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆʼ ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಎಕ್ಸ್‌ನಲ್ಲಿಯೇ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್‌ ʼಇಂದಿಗೂ ನಮ್ಮ ಹಳ್ಳಿಯ ಜನ ತಮ್ಮ ಜಾನಪದ ಪರಂಪರೆಯ ಮಾರಮ್ಮ, ಚೌಡಮ್ಮ, ಹುಲಿಗೆಮ್ಮ, ಯಲ್ಲಮ್ಮ, ಕಬ್ಬಾಳಮ್ಮ, ಮದ್ದೂರಮ್ಮ, ಮಾದಪ್ಪ, ಮುನೇಶ್ವರ, ಸಿದ್ದೇಶ್ವರ, ಭೂತ, ವರ್ತೆ, ಪಂಜುರ್ಲಿ ದೈವಗಳನ್ನೇ ತಮ್ಮ ಮನೆದೇವರಾಗಿ ಆರಾಧಿಸಿಕೊಂಡು ಬಂದವರು. ನಮ್ಮದು ಮೂಲ ದ್ರಾವಿಡ ಪರಂಪರೆ. ನಮ್ಮ ಹಳ್ಳಿಯ ಜನರ ಮನೆಗಳಲ್ಲಿ ಸಿಗುವುದು ನಮ್ಮ ಪರಂಪರೆಯ ದೈವಗಳು ನನ್ನ ಮಾತಿನ ಅರ್ಥವನ್ನು ತಿರುಚಿ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುವುದು, ಜನರನ್ನು ಭಾವನಾತ್ಮಕವಾಗಿ ಕೆಣಕುವುದು ಬಿಜೆಪಿ ಪಕ್ಷದ ಹಳಸಲು ಸಿದ್ಧಾಂತ. ಅಭಿವೃದ್ಧಿ, ಸಿದ್ಧಾಂತದ ಅಡಿಯಲ್ಲಿ ನಮ್ಮನ್ನು ಎದುರಿಸಲಾಗದ ನಿಮಗೆ ಸಿಗುವುದು ಇಂತವೇ ಪುರಾವೆಗಳು. ಜನ ದಡ್ಡರಲ್ಲ. ಈ ಚುನಾವಣೆ ನಿಮಗೆ ತಕ್ಕ ಪಾಠ ಕಲಿಸಲಿದೆ! ನೆನಪಿರಲಿ’ ಎಂದು ಟ್ವೀಟ್‌ ಮಾಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

5 mins ago

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

2 hours ago

ಉದ್ಘಾಟನೆಯಾಗದ ಅಂಬಾರಿ ಖ್ಯಾತಿಯ ಅರ್ಜುನನ ಸ್ಮಾರಕ

ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…

3 hours ago

ಸಾಂಸ್ಕೃತಿಕ ನಗರಿಯಲ್ಲಿ ಕ್ರಿಸ್‌ಮಸ್ ಸಂಭ್ರಮ

ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…

3 hours ago

ರಾಗಿ, ಹುರುಳಿ ಒಕ್ಕಣೆಗೆ ರಸ್ತೆಯೇ ಕಣ!

ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…

3 hours ago

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

14 hours ago