ಖಾಸಗಿ ಚಾನೆಲ್ ನಡೆಸಿದ ಸಂದರ್ಶನವೊಂದರಲ್ಲಿ ʼರಾಮನನ್ನು ದೇವರು ಅಂತ ಹೇಳಿ ನಮ್ಮ ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಪೂಜೆ ಮಾಡುವುದಿಲ್ಲ. ನೀವು ಹಳ್ಳಿಗಳಲ್ಲಿ ಹೋಗಿ ನೋಡಿ. ಮನೆಗಳಲ್ಲಿ ಕೆಲವರು ಫೋಟೊಗಳನ್ನು ಸಹ ಇಡುವುದಿಲ್ಲʼ ಎಂದು ಡಿಕೆ ಸುರೇಶ್ ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ವಿಡಿಯೊ ತುಣುಕನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ಆರ್ ಅಶೋಕ್ ʼದಕ್ಷಿಣ ಭಾರತದಲ್ಲಿ ಯಾರೂ ರಾಮನನ್ನ ಪೂಜಿಸುವುದಿಲ್ಲವಂತೆ. ಡಿಕೆ ಸುರೇಶ್ ಅವರ ನುಡಿಮುತ್ತುಗಳನ್ನ ಒಮ್ಮೆ ಕೇಳಿಸಿಕೊಳ್ಳಿ. ಅವರ ದೇಶ ವಿಭಜನೆಯ ಮಾತು ಬಾಯಿ ತಪ್ಪಿ ಬಂದಿದ್ದಲ್ಲ. ಅದರ ಹಿಂದೆ ಬಹಳ ದೊಡ್ಡ ಮಸಲತ್ತು ಇದೆ. ಹಿಂದೂ ಧರ್ಮ ಒಡೆದರೆ ಮಾತ್ರ ದೇಶ ಒಡೆಯಲು ಸಾಧ್ಯ ಅಂತ ಬ್ರಿಟಿಷರಿಂದ, ಮೊಘಲರಿಂದ, ಟಿಪ್ಪುವಿನಿಂದ ಚೆನ್ನಾಗಿ ಕಲಿತಿರುವ ಕಾಂಗ್ರೆಸ್ ನಾಯಕರು, ಅದನ್ನ ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆʼ ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ಎಕ್ಸ್ನಲ್ಲಿಯೇ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್ ʼಇಂದಿಗೂ ನಮ್ಮ ಹಳ್ಳಿಯ ಜನ ತಮ್ಮ ಜಾನಪದ ಪರಂಪರೆಯ ಮಾರಮ್ಮ, ಚೌಡಮ್ಮ, ಹುಲಿಗೆಮ್ಮ, ಯಲ್ಲಮ್ಮ, ಕಬ್ಬಾಳಮ್ಮ, ಮದ್ದೂರಮ್ಮ, ಮಾದಪ್ಪ, ಮುನೇಶ್ವರ, ಸಿದ್ದೇಶ್ವರ, ಭೂತ, ವರ್ತೆ, ಪಂಜುರ್ಲಿ ದೈವಗಳನ್ನೇ ತಮ್ಮ ಮನೆದೇವರಾಗಿ ಆರಾಧಿಸಿಕೊಂಡು ಬಂದವರು. ನಮ್ಮದು ಮೂಲ ದ್ರಾವಿಡ ಪರಂಪರೆ. ನಮ್ಮ ಹಳ್ಳಿಯ ಜನರ ಮನೆಗಳಲ್ಲಿ ಸಿಗುವುದು ನಮ್ಮ ಪರಂಪರೆಯ ದೈವಗಳು ನನ್ನ ಮಾತಿನ ಅರ್ಥವನ್ನು ತಿರುಚಿ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುವುದು, ಜನರನ್ನು ಭಾವನಾತ್ಮಕವಾಗಿ ಕೆಣಕುವುದು ಬಿಜೆಪಿ ಪಕ್ಷದ ಹಳಸಲು ಸಿದ್ಧಾಂತ. ಅಭಿವೃದ್ಧಿ, ಸಿದ್ಧಾಂತದ ಅಡಿಯಲ್ಲಿ ನಮ್ಮನ್ನು ಎದುರಿಸಲಾಗದ ನಿಮಗೆ ಸಿಗುವುದು ಇಂತವೇ ಪುರಾವೆಗಳು. ಜನ ದಡ್ಡರಲ್ಲ. ಈ ಚುನಾವಣೆ ನಿಮಗೆ ತಕ್ಕ ಪಾಠ ಕಲಿಸಲಿದೆ! ನೆನಪಿರಲಿ’ ಎಂದು ಟ್ವೀಟ್ ಮಾಡಿದ್ದಾರೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…