ಬೆಂಗಳೂರು : ಮಾಜಿ ಸಚಿವ ಡಿ.ಕೆ.ಸುರೇಶ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರು ಹಾಲು ಒಕ್ಕೂಟಕ್ಕೆ ಕನಕಪುರ ತಾಲ್ಲೂಕಿನ ನಿರ್ದಿಷ್ಟ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಪ್ರತಿದಿನ ಜಿದ್ದಾಜಿದ್ದಿ ರಾಜಕಾರಣ ಹೆಚ್ಚುತ್ತಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ತಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸುವ ತಯಾರಿಯಲ್ಲಿದ್ದಾರೆ. ಇದಕ್ಕೆ ಪ್ರತಿಯಾಗಿ ಖುದ್ದು ಡಿ.ಕೆ.ಸುರೇಶ್ರವರೇ ಅಖಾಡಕ್ಕೆ ಇಳಿಯುತ್ತಿದ್ದಾರೆ.
ಮುಂದಿನ ಜೂನ್ ವೇಳೆಗೆ ಹಾಲಿ ಕೆಎಂಎಫ್ ಅಧ್ಯಕ್ಷ ಭಿಮಾನಾಯಕ್ ಅವರ ಅಧಿಕಾರವಧಿ ಮುಗಿಯುತ್ತಿದೆ. ಕಳೆದ 10 ವರ್ಷಗಳಿಂದಲೂ ಕೆಎಂಎಫ್ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದೆ. ಹೆಚ್.ಡಿ.ರೇವಣ್ಣ ಹಾಗೂ ಸದಾನಂದಗೌಡರಂತಹ ಘಟಾನುಘಟಿಗಳು ಕೆಎಂಎಫ್ನ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ರಾಜ್ಯದಲ್ಲಿ ಕೆಎಂಎಫ್ ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಅದರ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಸುರೇಶ್ ಸಹಕಾರ ಕ್ಷೇತ್ರದ ರಾಜಕಾರಣಕ್ಕೆ ಕಾಲಿಟ್ಟಿದ್ದಾರೆ. ಶನಿವಾರ ಮಧ್ಯಾಹ್ನ ಕನಕಪುರ ತಾಲ್ಲೂಕು ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಬೆಂಗಳೂರು ಜಿಲ್ಲಾ ಡೈರಿಯ ಅಧ್ಯಕ್ಷರಾಗಿ ಅನಂತರ ಕೆಎಂಎಫ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದು ಡಿ.ಕೆ.ಸುರೇಶ್ ಅವರ ಇರಾದೆ ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಜನ ನನಗೆ ವಿಶ್ರಾಂತಿ ನೀಡಿದ್ದಾರೆ. ಹೀಗಾಗಿ ಸದ್ಯಕ್ಕೆ ನಾನು ಯಾವುದೇ ಉದ್ಯೋಗದ ಆಕಾಂಕ್ಷಿಯಲ್ಲ. ವಿಶ್ರಾಂತ ಜೀವನ ನಡೆಸುತ್ತೇನೆ ಎಂದು ಡಿ.ಕೆ.ಸುರೇಶ್ ಘೋಷಿಸಿದ್ದರು. ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಭಾರಿ ಒತ್ತಡಗಳು ಬಂದಾಗಲೂ ಡಿ.ಕೆ.ಸುರೇಶ್ ಒಪ್ಪಿರಲಿಲ್ಲ. ಕೊನೆಗೆ ಬಿಜೆಪಿಯ ವಿಧಾನಪರಿಷತ್ನ ಸದಸ್ಯರಾಗಿದ್ದ ಸಿ.ಪಿ.ಯೋಗೇಶ್ವರ್ ಅವರನ್ನು ಕರೆತಂದು ಅಭ್ಯರ್ಥಿ ಮಾಡಲಾಯಿತು. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿತ್ತು. ಪ್ರತಿ ಹಂತದಲ್ಲೂ ರಾಜಕೀಯವಾಗಿ ತಾವು ಯಾವುದೇ ಆಕಾಂಕ್ಷಿಯಲ್ಲ ಎಂದು ಪದೇಪದೇ ಡಿ.ಕೆ.ಸುರೇಶ್ ಹೇಳುತ್ತಿದ್ದರು. ಈಗ ಏಕಾಏಕಿ ಸಹಕಾರ ಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಮಾಡಿರುವುದು ಕುತೂಹಲ ಕೆರಳಿಸಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…