ಬೆಂಗಳೂರು: ಅಚ್ಚರಿ ಗೆಲುವಿನ ಮೂಲಕ ಕನಕಪುರ ಬಂಡೆಯ ಸುಭದ್ರ ಕೋಟೆಯಾದ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿಎನ್ ಮಂಜುನಾಥ್ ಅವರು ಗೆಲುವಿನ ಪತಾಕೆ ಹಾರಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮೈತ್ರಿ ಒಕ್ಕೂಟವು ಈ ಬಾರಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ತೋರಿದೆ.
ಇಂದು (ಜೂನ್.4) ದೇಶಾದ್ಯಂತ ಲೋಕಸಭಾ ಚುನಾವಣಾ ಮತೆ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನು ಹೀನಾಯವಾಗಿ ಸೋಲಿಸಿದ್ದಾರೆ.
ಇನ್ನು ಈ ಸೋಲಿನ ಬಳಿಕ ಮೊದಲ ಬಾರಿಗೆ ಡಿಕೆ ಸುರೇಶ್ ಅವರು ಮಾಧ್ಯಮದ ಜತೆ ಮಾತನಾಡಿದ್ದಾರೆ. ಜನರ ತೀರ್ಮಾನವೇ ಅಂತಿಮ ಇದನ್ನು ನಾನು ಗೌರವದಿಂದ ಸ್ವೀಕರಿಸುತ್ತೇನೆ. ಡಾ.ಸಿಎನ್ ಮಂಜುನಾಥ್ ಅವರಿಗೆ ನನ್ನ ಶುಭಾಷಯಗಳು. ನೂತನ ಸಂಸದರಾದ ಮಂಜುನಾಥ್ ಅವರು ಈ ಕ್ಷೇತ್ರದಲ್ಲಿ ಒಳ್ಳೆಯ ಕೆಲಸವನ್ನು ಮಾಡಲಿ ಎಂದು ಆಶಿಸುತ್ತೇನೆ. ಕ್ಷೇತ್ರದ ಬೆಳವಣಿಗೆಗೆ ನಮ್ಮ ಸಹಕಾರ ನಿಮ್ಮೊಂದಿಗಿರುತ್ತದೆ ಶುಭವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…