ರಾಮನಗರ : ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ಕೆ ಎನ್ ರಾಜಣ್ಣ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬಿಟ್ಟುಕೊಡಬೇಕೆಂಬ ಸಚಿವ ಕೆಎನ್ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆ ಶಿವಕುಮಾರ್ ಅವರನ್ನ ಯಾರೂ ಟಾರ್ಗೆಟ್ ಮಾಡಲು ಆಗಲ್ಲ. ಅವರನ್ನು ಟಾರ್ಗೆಟ್ ಮಾಡುತ್ತೇನೆ ಅಂದರೆ ಅದು ಅವರ ಭ್ರಮೆ. 35 ವರ್ಷಗಳ ಸುದೀರ್ಘ ರಾಜಕಾರಣ ಮಾಡಿದ್ದಾರೆ ಹೊರತು ಯಾರದ್ದೋ ಹೆಸರಿನಲ್ಲಿ ರಾಜಕೀಯಕ್ಕೆ ಬಂದವರಲ್ಲ. ಹೋರಾಟದ ಮೂಲಕ ರಾಜಕಾರಣ ಮಾಡಿಕೊಂಡು ಬಂದವರು ಡಿಕೆಶಿ ಎಂದು ರಾಜಣ್ಣಗೆ ಟಾಂಗ್ ಕೊಟ್ಟಿದ್ದಾರೆ.
ಅಲ್ಲದೆ ಉತ್ತಮವಾದ ಆಡಳಿತ ನಡೆಸಲಿ ಎಂದು ಹೈಕಮಾಂಡ್ ಜವಾಬ್ದಾರಿ ನೀಡಿದ್ದಾರೆ. ಡಿಕೆಶಿವಕುಮಾರ್ ಗೆ ಯೋಗ್ಯತೆ ಇಲ್ಲ ಎನ್ನುವುದಾದರೆ ಚುನಾವಣೆಗೆ ಹೋಗುವುದು ವಾಸಿ, ನಾವೆಲ್ಲರೂ ಚುನಾವಣೆಗೆ ಹೋಗೋಣ ಎಂದಿದ್ದಾರೆ. ಡಿ.ಕೆ ಶಿವಕುಮಾರ್ ಗೆ ಜವಾಬ್ದಾರಿ ಕೊಟ್ಟಿರುವುದು ವರಿಷ್ಠರು. ಅವರ ಮುಂದೆ ಎಲ್ಲವನ್ನು ತಿಳಿಸಿದ್ದಾರೆ. ವರಿಷ್ಠರು ಹೇಳಿರುವುದನ್ನ ಇತರರಿಗೆ ತಿಳಿಸಲು ಸಾಧ್ಯವಾಗುವುದಿಲ್ಲ ಎಂದರು
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…