ರಾಜ್ಯ

ಮುನಿರತ್ನ ವಿರುದ್ಧ ದಾಖಲೆ ಸಮೇತ ಮಾತನಾಡುವೆ : ಡಿ.ಕೆ ಸುರೇಶ್ (D.K Suresh)

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲೆಗಳ ಸಮೇತ ಮಂಗಳವಾರ ಮಾತನಾಡುವುದಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K Suresh) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಸವಾಲ್ ಹಾಕಿರುವುದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದರು.

ಅವನು ಎಂಥಾ ಚೆಂಗ್ಲು ಅಂತ ಗೊತ್ತಿದ್ಯಾ? ನಾನು ದಾಖಲೆ ಸಮೇತ ಬಿಡುಗಡೆ ಮಾತನಾಡುತ್ತೇನೆ. ಆಸಿಡ್ ಮೊಟ್ಟೆ ತಲೆಗೆ ಬಿದ್ದು ಮೆಂಟಲ್ ಆಗಿದ್ದಾನೆ, ಏನೇನೊ ಮಾತನಾಡುತ್ತಿದ್ದಾನೆ ಎಂದು ಲೇವಡಿ ಮಾಡಿದರು.

ಆಸಿಡ್ ಮೊಟ್ಟೆ ಅವರ ತಲೆ ಮೇಲೆ ಬಿದ್ದಿದೆ. ಅದಕ್ಕೆ ಅವರಿಗೆ ಆ ರೀತಿ ಆಗಿದೆ ಎಂದು ವೈದ್ಯರು ಅವತ್ತೆ ಹೇಳಿದ್ರಲ್ಲ ಎಂದು ಸಂಸದ ಡಾ.ಮಂಜುನಾಥ್ ಹೆಸರು ಹೇಳದೆ ಪರೋಕ್ಷವಾಗಿ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.

ರಾಜ್ಯದ ಹುಚ್ಚು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೆ ಸರಿ ಹೋಗಲ್ಲ. ಕೇಂದ್ರದ ಮೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.
ರಾಜ್ಯಪಾಲರು, ರಾಷ್ಟ್ರಪತಿ ಎಲ್ಲರಿಗೂ ದೂರು ಕೊಡ್ತಾರಲ್ಲ. ಪ್ರಧಾನಿ ಸಾಮಾನ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಾರಾ, ಇಲ್ಲ ಮುನಿರತ್ನಗೆ ಪ್ರಧಾನಿ ಚಿಕಿತ್ಸೆ ಪಡೆಯುವ ಆಸ್ಪತ್ರೆಯಲ್ಲಿ ಟ್ರೀಟೆಂಟ್ ಕೊಡಿಸಬೇಕು. ದೆಹಲಿಯ ಏಮ್ಸೌನಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.

ಮುನಿರತ್ನ ವಿರುದ್ಧ ಬಳಕೆ ಮಾಡಲು ಚಂಗ್ಲು ಪದಕ್ಕಿಂದ ಬೇರೆ ಏನಾದರೂ ಇದೆಯೇ ಹೇಳಿ ಎಂದು ಪ್ರಶ್ನಿಸಿದ ಸುರೇಶ್, ಆ ಪದವನ್ನೇ ಬಳಸಿ ಅವನಿಗೆ ಛೀಮಾರಿ ಹಾಕುತ್ತೇನೆ. ಈಗ ಮಾತನಾಡುವುದಿಲ್ಲ ಎಂದರು.

ಜಾತಿ ಜನಗಣತಿ ವರದಿಯನ್ನು ನಾನು ಪೂರ್ಣವಾಗಿ ವರದಿಯನ್ನ ನೋಡಿಲ್ಲ, ಅಂಕಿ ಅಂಶಗಳನ್ನ ನೋಡಿ ಮಾತನಾಡುತ್ತೇನೆ. ಮಂಗಳವಾರ ಈ ಬಗ್ಗೆ ಮಾತಾಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

3 mins ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

12 mins ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

23 mins ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

27 mins ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

47 mins ago

ಇಂದು ದಿ.ಎಲ್.ಜಿ.ಹಾವನೂರು ಹುಟ್ಟುಹಬ್ಬ ; ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಹಾವನೂರು

ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…

59 mins ago