ರಾಜ್ಯ

ಮುನಿರತ್ನ ವಿರುದ್ಧ ದಾಖಲೆ ಸಮೇತ ಮಾತನಾಡುವೆ : ಡಿ.ಕೆ ಸುರೇಶ್ (D.K Suresh)

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲೆಗಳ ಸಮೇತ ಮಂಗಳವಾರ ಮಾತನಾಡುವುದಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K Suresh) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಸವಾಲ್ ಹಾಕಿರುವುದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದರು.

ಅವನು ಎಂಥಾ ಚೆಂಗ್ಲು ಅಂತ ಗೊತ್ತಿದ್ಯಾ? ನಾನು ದಾಖಲೆ ಸಮೇತ ಬಿಡುಗಡೆ ಮಾತನಾಡುತ್ತೇನೆ. ಆಸಿಡ್ ಮೊಟ್ಟೆ ತಲೆಗೆ ಬಿದ್ದು ಮೆಂಟಲ್ ಆಗಿದ್ದಾನೆ, ಏನೇನೊ ಮಾತನಾಡುತ್ತಿದ್ದಾನೆ ಎಂದು ಲೇವಡಿ ಮಾಡಿದರು.

ಆಸಿಡ್ ಮೊಟ್ಟೆ ಅವರ ತಲೆ ಮೇಲೆ ಬಿದ್ದಿದೆ. ಅದಕ್ಕೆ ಅವರಿಗೆ ಆ ರೀತಿ ಆಗಿದೆ ಎಂದು ವೈದ್ಯರು ಅವತ್ತೆ ಹೇಳಿದ್ರಲ್ಲ ಎಂದು ಸಂಸದ ಡಾ.ಮಂಜುನಾಥ್ ಹೆಸರು ಹೇಳದೆ ಪರೋಕ್ಷವಾಗಿ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.

ರಾಜ್ಯದ ಹುಚ್ಚು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೆ ಸರಿ ಹೋಗಲ್ಲ. ಕೇಂದ್ರದ ಮೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.
ರಾಜ್ಯಪಾಲರು, ರಾಷ್ಟ್ರಪತಿ ಎಲ್ಲರಿಗೂ ದೂರು ಕೊಡ್ತಾರಲ್ಲ. ಪ್ರಧಾನಿ ಸಾಮಾನ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಾರಾ, ಇಲ್ಲ ಮುನಿರತ್ನಗೆ ಪ್ರಧಾನಿ ಚಿಕಿತ್ಸೆ ಪಡೆಯುವ ಆಸ್ಪತ್ರೆಯಲ್ಲಿ ಟ್ರೀಟೆಂಟ್ ಕೊಡಿಸಬೇಕು. ದೆಹಲಿಯ ಏಮ್ಸೌನಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.

ಮುನಿರತ್ನ ವಿರುದ್ಧ ಬಳಕೆ ಮಾಡಲು ಚಂಗ್ಲು ಪದಕ್ಕಿಂದ ಬೇರೆ ಏನಾದರೂ ಇದೆಯೇ ಹೇಳಿ ಎಂದು ಪ್ರಶ್ನಿಸಿದ ಸುರೇಶ್, ಆ ಪದವನ್ನೇ ಬಳಸಿ ಅವನಿಗೆ ಛೀಮಾರಿ ಹಾಕುತ್ತೇನೆ. ಈಗ ಮಾತನಾಡುವುದಿಲ್ಲ ಎಂದರು.

ಜಾತಿ ಜನಗಣತಿ ವರದಿಯನ್ನು ನಾನು ಪೂರ್ಣವಾಗಿ ವರದಿಯನ್ನ ನೋಡಿಲ್ಲ, ಅಂಕಿ ಅಂಶಗಳನ್ನ ನೋಡಿ ಮಾತನಾಡುತ್ತೇನೆ. ಮಂಗಳವಾರ ಈ ಬಗ್ಗೆ ಮಾತಾಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

30 mins ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

34 mins ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

36 mins ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

44 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

57 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

1 hour ago