ರಾಜ್ಯ

ಮುನಿರತ್ನ ವಿರುದ್ಧ ದಾಖಲೆ ಸಮೇತ ಮಾತನಾಡುವೆ : ಡಿ.ಕೆ ಸುರೇಶ್ (D.K Suresh)

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲೆಗಳ ಸಮೇತ ಮಂಗಳವಾರ ಮಾತನಾಡುವುದಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K Suresh) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಸವಾಲ್ ಹಾಕಿರುವುದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದರು.

ಅವನು ಎಂಥಾ ಚೆಂಗ್ಲು ಅಂತ ಗೊತ್ತಿದ್ಯಾ? ನಾನು ದಾಖಲೆ ಸಮೇತ ಬಿಡುಗಡೆ ಮಾತನಾಡುತ್ತೇನೆ. ಆಸಿಡ್ ಮೊಟ್ಟೆ ತಲೆಗೆ ಬಿದ್ದು ಮೆಂಟಲ್ ಆಗಿದ್ದಾನೆ, ಏನೇನೊ ಮಾತನಾಡುತ್ತಿದ್ದಾನೆ ಎಂದು ಲೇವಡಿ ಮಾಡಿದರು.

ಆಸಿಡ್ ಮೊಟ್ಟೆ ಅವರ ತಲೆ ಮೇಲೆ ಬಿದ್ದಿದೆ. ಅದಕ್ಕೆ ಅವರಿಗೆ ಆ ರೀತಿ ಆಗಿದೆ ಎಂದು ವೈದ್ಯರು ಅವತ್ತೆ ಹೇಳಿದ್ರಲ್ಲ ಎಂದು ಸಂಸದ ಡಾ.ಮಂಜುನಾಥ್ ಹೆಸರು ಹೇಳದೆ ಪರೋಕ್ಷವಾಗಿ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.

ರಾಜ್ಯದ ಹುಚ್ಚು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೆ ಸರಿ ಹೋಗಲ್ಲ. ಕೇಂದ್ರದ ಮೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.
ರಾಜ್ಯಪಾಲರು, ರಾಷ್ಟ್ರಪತಿ ಎಲ್ಲರಿಗೂ ದೂರು ಕೊಡ್ತಾರಲ್ಲ. ಪ್ರಧಾನಿ ಸಾಮಾನ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಾರಾ, ಇಲ್ಲ ಮುನಿರತ್ನಗೆ ಪ್ರಧಾನಿ ಚಿಕಿತ್ಸೆ ಪಡೆಯುವ ಆಸ್ಪತ್ರೆಯಲ್ಲಿ ಟ್ರೀಟೆಂಟ್ ಕೊಡಿಸಬೇಕು. ದೆಹಲಿಯ ಏಮ್ಸೌನಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.

ಮುನಿರತ್ನ ವಿರುದ್ಧ ಬಳಕೆ ಮಾಡಲು ಚಂಗ್ಲು ಪದಕ್ಕಿಂದ ಬೇರೆ ಏನಾದರೂ ಇದೆಯೇ ಹೇಳಿ ಎಂದು ಪ್ರಶ್ನಿಸಿದ ಸುರೇಶ್, ಆ ಪದವನ್ನೇ ಬಳಸಿ ಅವನಿಗೆ ಛೀಮಾರಿ ಹಾಕುತ್ತೇನೆ. ಈಗ ಮಾತನಾಡುವುದಿಲ್ಲ ಎಂದರು.

ಜಾತಿ ಜನಗಣತಿ ವರದಿಯನ್ನು ನಾನು ಪೂರ್ಣವಾಗಿ ವರದಿಯನ್ನ ನೋಡಿಲ್ಲ, ಅಂಕಿ ಅಂಶಗಳನ್ನ ನೋಡಿ ಮಾತನಾಡುತ್ತೇನೆ. ಮಂಗಳವಾರ ಈ ಬಗ್ಗೆ ಮಾತಾಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

4 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

4 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

4 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

4 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

4 hours ago