dk suresh verbal attack on munirathna
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲೆಗಳ ಸಮೇತ ಮಂಗಳವಾರ ಮಾತನಾಡುವುದಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K Suresh) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಸವಾಲ್ ಹಾಕಿರುವುದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದರು.
ಅವನು ಎಂಥಾ ಚೆಂಗ್ಲು ಅಂತ ಗೊತ್ತಿದ್ಯಾ? ನಾನು ದಾಖಲೆ ಸಮೇತ ಬಿಡುಗಡೆ ಮಾತನಾಡುತ್ತೇನೆ. ಆಸಿಡ್ ಮೊಟ್ಟೆ ತಲೆಗೆ ಬಿದ್ದು ಮೆಂಟಲ್ ಆಗಿದ್ದಾನೆ, ಏನೇನೊ ಮಾತನಾಡುತ್ತಿದ್ದಾನೆ ಎಂದು ಲೇವಡಿ ಮಾಡಿದರು.
ಆಸಿಡ್ ಮೊಟ್ಟೆ ಅವರ ತಲೆ ಮೇಲೆ ಬಿದ್ದಿದೆ. ಅದಕ್ಕೆ ಅವರಿಗೆ ಆ ರೀತಿ ಆಗಿದೆ ಎಂದು ವೈದ್ಯರು ಅವತ್ತೆ ಹೇಳಿದ್ರಲ್ಲ ಎಂದು ಸಂಸದ ಡಾ.ಮಂಜುನಾಥ್ ಹೆಸರು ಹೇಳದೆ ಪರೋಕ್ಷವಾಗಿ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.
ರಾಜ್ಯದ ಹುಚ್ಚು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೆ ಸರಿ ಹೋಗಲ್ಲ. ಕೇಂದ್ರದ ಮೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.
ರಾಜ್ಯಪಾಲರು, ರಾಷ್ಟ್ರಪತಿ ಎಲ್ಲರಿಗೂ ದೂರು ಕೊಡ್ತಾರಲ್ಲ. ಪ್ರಧಾನಿ ಸಾಮಾನ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಾರಾ, ಇಲ್ಲ ಮುನಿರತ್ನಗೆ ಪ್ರಧಾನಿ ಚಿಕಿತ್ಸೆ ಪಡೆಯುವ ಆಸ್ಪತ್ರೆಯಲ್ಲಿ ಟ್ರೀಟೆಂಟ್ ಕೊಡಿಸಬೇಕು. ದೆಹಲಿಯ ಏಮ್ಸೌನಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.
ಮುನಿರತ್ನ ವಿರುದ್ಧ ಬಳಕೆ ಮಾಡಲು ಚಂಗ್ಲು ಪದಕ್ಕಿಂದ ಬೇರೆ ಏನಾದರೂ ಇದೆಯೇ ಹೇಳಿ ಎಂದು ಪ್ರಶ್ನಿಸಿದ ಸುರೇಶ್, ಆ ಪದವನ್ನೇ ಬಳಸಿ ಅವನಿಗೆ ಛೀಮಾರಿ ಹಾಕುತ್ತೇನೆ. ಈಗ ಮಾತನಾಡುವುದಿಲ್ಲ ಎಂದರು.
ಜಾತಿ ಜನಗಣತಿ ವರದಿಯನ್ನು ನಾನು ಪೂರ್ಣವಾಗಿ ವರದಿಯನ್ನ ನೋಡಿಲ್ಲ, ಅಂಕಿ ಅಂಶಗಳನ್ನ ನೋಡಿ ಮಾತನಾಡುತ್ತೇನೆ. ಮಂಗಳವಾರ ಈ ಬಗ್ಗೆ ಮಾತಾಡುತ್ತೇನೆ ಎಂದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…