ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ನಿಂದ ಬುಲಾವ್ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪೈಪೋಟಿ ನಡೆಸಿದ್ದರು. ಕೊನೆಗೆ ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಅಲಂಕರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 100 ದಿನಗಳನ್ನೂ ಪೂರೈಸಿದೆ. ಆ ಸಂಭ್ರಮಾಚರಣೆ ಕೂಡ ನಡೆಯಿತು. ಆದರೆ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಧಿಕಾರಕ್ಕಾಗಿನ ಪೈಪೋಟಿ ಇನ್ನೂ ನಿಂತಂತೆ ಕಾಣುತ್ತಿಲ್ಲ. ಸಿದ್ದು ಪರ ಶಾಸಕರು ಹಾಗೂ ನಾಯಕರು, ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಆಡಳಿತ ನಡೆಸಲಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಪರ ನಾಯಕರು ಮುಂದಿನ ಎರಡೂವರೆ ವರ್ಷ ಅವಧಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ.
ಈ ಬೆಳವಣಿಗೆ ಪಕ್ಷದೊಳಗಿನ ನಾಯಕತ್ವದ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಇದು ವಿಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಿಡಿಕಾರಿವೆ. ನಾಯಕತ್ವದ ಕಿತ್ತಾಟದಿಂದ ರಾಜ್ಯದ ಆಡಳಿತದಲ್ಲಿ ಅಭಿವೃದ್ಧಿ ಕ್ಷೀಣಿಸುತ್ತಿದೆ ಎಂದು ಟೀಕಿಸಿವೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…