ಬೆಂಗಳೂರು : ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ.
ಲೋಕಭವನದ ಗಾಜಿನ ಮನೆ (ಗ್ಲಾಸ್ ಹೌಸ್) ಮದುವಣಗಿತ್ತಿಯಂತೆ ಕಂಗೊಳಿಸುತ್ತಿದ್ದು, ಇಂದು (ಜೂನ್ 3) ಸಂಜೆ ಸರಿಯಾಗಿ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್ ಹಾಗೂ ಬ್ಯಾನರ್ಗಳು ರಾರಾಜಿಸುತ್ತಿವೆ.
ಮುಖ್ಯಮಂತ್ರಿ ಸ್ಥಾನಕ್ಕೆ ತಲುಪುವುದು ಬರೀ ಕನಸಾಗಿರಲಿಲ್ಲ, ಇದು ಕಠಿಣ ಪರಿಶ್ರಮದೊಂದಿಗಿನ ಸಮರ್ಪಣೆಯಾಗಿದೆ. ಸಮಯ ಜಟಿಲವಾಗಿತ್ತು, ವಿಳಂಬವಾಗಿರಬಹುದು ಆದರೆ ಹೈಕಮಾಂಡ್ ನನ್ನನ್ನು ನಿರಾಕರಿಸಿಲ್ಲ. ಇದು ಕೇವಲ ಶಿವಕುಮಾರ್ ಒಬ್ಬನ ಸಾಧನೆಯಲ್ಲ. ಕಾಂಗ್ರೆಸ್ ಇತಿಹಾಸ ಹಾಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಸಾವಿರಾರು ಕಾರ್ಯಕರ್ತರ ಶ್ರಮದ ಫಲ ಎಂದು ಮಂಗಳವಾರ ದಿಲ್ಲಿಯಲ್ಲಿ ಡಿಕೆ ಶಿವಕುಮಾರ್ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ಗಾಂಧಿ-ನೆಹರು ಕುಟುಂಬಕ್ಕೆ ನಿಷ್ಠರಾಗಿರುವುದು ತಮ್ಮ ಕರ್ತವ್ಯ ಎಂದಿರುವ ಅವರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ತ್ಯಾಗವನ್ನು ಕೊಂಡಾಡಿದ್ದಾರೆ. ಅಲ್ಲದೆ, ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆ ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮೂಲಕ ರಾಜ್ಯದಲ್ಲಿ ಹೊಸ ‘ಯುವಯುಗ’ ಹಾಗೂ ‘ನವಯುಗ’ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…