ಬೆಂಗಳೂರು: ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಹಿಂದೆಯೂ ಒಗ್ಗಟ್ಟಾಗಿದ್ದೆವು. ಈಗಲೂ ಒಗ್ಗಟ್ಟಾಗಿದ್ದೇವೆ. ನಮ್ಮಿಬ್ಬರದ್ದು ಒಂದೇ ಸಿದ್ಧಾಂತ. 2028ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳಿಕ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಹೇಳಿದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳಿದರು.
ಈ ಮೂಲಕ ಕುರ್ಚಿ ಕದನ ವಿಚಾರವನ್ನು ಸಿಎಂ ಹಾಗೂ ಡಿಸಿಎಂ ಹೈಕಮಾಂಡ್ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದಾರೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…