ರಾಜ್ಯ

ಹಿರಿಯ ನಟಿ ಲೀಲಾವತಿಗೆ ಡಿಕೆಶಿ ಅಂತಿಮ ನಮನ

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಅವರು ನೆನ್ನೆ ವಯೋಸಹಜ ಕಾರಣದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ಅವರ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಲೀಲಾವತಿ ಅವರು ಕಟ್ಟಿಸಿದ ಪಶುವೈದ್ಯಕೀಯ ಆಸ್ಪತ್ರೆಯನ್ನು ನಾನು ಉದ್ಘಾಟಿಸಿದ್ದು ನನ್ನ ಮನಸ್ಸಿಗೆ ನೆಮ್ಮದಿ ಕೊಟ್ಟ ಕೆಲಸ. ಕೊನೆಯ ಬಾರಿಗೆ ಲೀಲಾವತಿಯವರು ನನ್ನ ಮನೆಗೆ ಬಂದು ಆಸ್ಪತ್ರೆ ಉದ್ಘಾಟನೆಯ ಆಹ್ವಾನ ಪತ್ರಿಕೆ ನೀಡಿದ್ದರು. ಆಗ ಎಲ್ಲರನ್ನೂ ಗುರುತು ಹಿಡಿಯುತ್ತಿದ್ದರು. ಆಗ ಅವರಿಗೆ ಸ್ವಲ್ಪ ಪ್ರಜ್ಞೆ ಇತ್ತು ನೀವು ಬಂದು ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕು ಎನ್ನುವುದು ನನ್ನ ಜೀವನದ ಕೊನೆಯ ಆಸೆ. ನೀವು ಉದ್ಘಾಟನೆಗೆ ಬರಲೇ ಬೇಕು ಎಂದು ಮನವಿ ಮಾಡಿದ್ದರು. ಕೆಲಸದ ಒತ್ತಡದ ನಡುವೆಯೂ ಆಸ್ಪತ್ರೆ ಉದ್ಘಾಟನೆ ಮಾಡಿದ್ದೆ. ಯಾರು ಕೇಳದೇ ಇದ್ದರೂ ತಾನಾಗಿಯೇ ಆಸ್ಪತ್ರೆ ಕಟ್ಟಿಸಿದ್ದರು. ಇದು ಅವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾಗಿದೆ.

ದುಡ್ಡಿರುವ ಮನುಷ್ಯ ದಾನ ಧರ್ಮ ಮಾಡಬಹುದು. ಆದರೆ ಆರ್ಥಿಕವಾಗಿ ಶಕ್ತಿ ಇಲ್ಲದವರು ಸಮಾಜಕ್ಕೆ ಹಾಗೂ ಮೂಕ ಪ್ರಾಣಿಗಳಿಗೆ ಸಹಾಯ ಮಾಡಬೇಕೆಂದು ಆಸ್ಪತ್ರೆ ನಿರ್ಮಿಸಿರುವುದು ದೊಡ್ಡ ವಿಷಯ. ಇದು ಸಮಾಜಕ್ಕೆ ದೊಡ್ಡ ಸಂದೇಶ ಎಂದು ಹೊಗಳಿದ್ದಾರೆ.

ಮನುಷ್ಯ ಹುಟ್ಟಿದ ಮೇಲೆ ಸಾಯಲೇ ಬೇಕು. ಹುಟ್ಟು ಸಾವಿನ ನಡುವೆ ಸಾಧನೆ ಮಾಡಬೇಕು. ಲೀಲಾವತಿಯವರ ಸಾಧನೆ ಹಾಗೂ ಸಾರ್ಥಕ ಜೀವನ ನಮಗೆಲ್ಲರಿಗೂ ಆದರ್ಶ. ಲೀಲಾವತಿ ಅಮ್ಮನವರನ್ನು ಎಲ್ಲಾ ತರಹದ ಗೌರವ ನೀಡಿ ಕಳುಹಿಸಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದು ಹೇಳಿದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago