ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರು ನೆನ್ನೆ ವಯೋಸಹಜ ಕಾರಣದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ಅವರ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಲೀಲಾವತಿ ಅವರು ಕಟ್ಟಿಸಿದ ಪಶುವೈದ್ಯಕೀಯ ಆಸ್ಪತ್ರೆಯನ್ನು ನಾನು ಉದ್ಘಾಟಿಸಿದ್ದು ನನ್ನ ಮನಸ್ಸಿಗೆ ನೆಮ್ಮದಿ ಕೊಟ್ಟ ಕೆಲಸ. ಕೊನೆಯ ಬಾರಿಗೆ ಲೀಲಾವತಿಯವರು ನನ್ನ ಮನೆಗೆ ಬಂದು ಆಸ್ಪತ್ರೆ ಉದ್ಘಾಟನೆಯ ಆಹ್ವಾನ ಪತ್ರಿಕೆ ನೀಡಿದ್ದರು. ಆಗ ಎಲ್ಲರನ್ನೂ ಗುರುತು ಹಿಡಿಯುತ್ತಿದ್ದರು. ಆಗ ಅವರಿಗೆ ಸ್ವಲ್ಪ ಪ್ರಜ್ಞೆ ಇತ್ತು ನೀವು ಬಂದು ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕು ಎನ್ನುವುದು ನನ್ನ ಜೀವನದ ಕೊನೆಯ ಆಸೆ. ನೀವು ಉದ್ಘಾಟನೆಗೆ ಬರಲೇ ಬೇಕು ಎಂದು ಮನವಿ ಮಾಡಿದ್ದರು. ಕೆಲಸದ ಒತ್ತಡದ ನಡುವೆಯೂ ಆಸ್ಪತ್ರೆ ಉದ್ಘಾಟನೆ ಮಾಡಿದ್ದೆ. ಯಾರು ಕೇಳದೇ ಇದ್ದರೂ ತಾನಾಗಿಯೇ ಆಸ್ಪತ್ರೆ ಕಟ್ಟಿಸಿದ್ದರು. ಇದು ಅವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾಗಿದೆ.
ದುಡ್ಡಿರುವ ಮನುಷ್ಯ ದಾನ ಧರ್ಮ ಮಾಡಬಹುದು. ಆದರೆ ಆರ್ಥಿಕವಾಗಿ ಶಕ್ತಿ ಇಲ್ಲದವರು ಸಮಾಜಕ್ಕೆ ಹಾಗೂ ಮೂಕ ಪ್ರಾಣಿಗಳಿಗೆ ಸಹಾಯ ಮಾಡಬೇಕೆಂದು ಆಸ್ಪತ್ರೆ ನಿರ್ಮಿಸಿರುವುದು ದೊಡ್ಡ ವಿಷಯ. ಇದು ಸಮಾಜಕ್ಕೆ ದೊಡ್ಡ ಸಂದೇಶ ಎಂದು ಹೊಗಳಿದ್ದಾರೆ.
ಮನುಷ್ಯ ಹುಟ್ಟಿದ ಮೇಲೆ ಸಾಯಲೇ ಬೇಕು. ಹುಟ್ಟು ಸಾವಿನ ನಡುವೆ ಸಾಧನೆ ಮಾಡಬೇಕು. ಲೀಲಾವತಿಯವರ ಸಾಧನೆ ಹಾಗೂ ಸಾರ್ಥಕ ಜೀವನ ನಮಗೆಲ್ಲರಿಗೂ ಆದರ್ಶ. ಲೀಲಾವತಿ ಅಮ್ಮನವರನ್ನು ಎಲ್ಲಾ ತರಹದ ಗೌರವ ನೀಡಿ ಕಳುಹಿಸಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದು ಹೇಳಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…