ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರು ನೆನ್ನೆ ವಯೋಸಹಜ ಕಾರಣದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ಅವರ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಲೀಲಾವತಿ ಅವರು ಕಟ್ಟಿಸಿದ ಪಶುವೈದ್ಯಕೀಯ ಆಸ್ಪತ್ರೆಯನ್ನು ನಾನು ಉದ್ಘಾಟಿಸಿದ್ದು ನನ್ನ ಮನಸ್ಸಿಗೆ ನೆಮ್ಮದಿ ಕೊಟ್ಟ ಕೆಲಸ. ಕೊನೆಯ ಬಾರಿಗೆ ಲೀಲಾವತಿಯವರು ನನ್ನ ಮನೆಗೆ ಬಂದು ಆಸ್ಪತ್ರೆ ಉದ್ಘಾಟನೆಯ ಆಹ್ವಾನ ಪತ್ರಿಕೆ ನೀಡಿದ್ದರು. ಆಗ ಎಲ್ಲರನ್ನೂ ಗುರುತು ಹಿಡಿಯುತ್ತಿದ್ದರು. ಆಗ ಅವರಿಗೆ ಸ್ವಲ್ಪ ಪ್ರಜ್ಞೆ ಇತ್ತು ನೀವು ಬಂದು ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕು ಎನ್ನುವುದು ನನ್ನ ಜೀವನದ ಕೊನೆಯ ಆಸೆ. ನೀವು ಉದ್ಘಾಟನೆಗೆ ಬರಲೇ ಬೇಕು ಎಂದು ಮನವಿ ಮಾಡಿದ್ದರು. ಕೆಲಸದ ಒತ್ತಡದ ನಡುವೆಯೂ ಆಸ್ಪತ್ರೆ ಉದ್ಘಾಟನೆ ಮಾಡಿದ್ದೆ. ಯಾರು ಕೇಳದೇ ಇದ್ದರೂ ತಾನಾಗಿಯೇ ಆಸ್ಪತ್ರೆ ಕಟ್ಟಿಸಿದ್ದರು. ಇದು ಅವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾಗಿದೆ.
ದುಡ್ಡಿರುವ ಮನುಷ್ಯ ದಾನ ಧರ್ಮ ಮಾಡಬಹುದು. ಆದರೆ ಆರ್ಥಿಕವಾಗಿ ಶಕ್ತಿ ಇಲ್ಲದವರು ಸಮಾಜಕ್ಕೆ ಹಾಗೂ ಮೂಕ ಪ್ರಾಣಿಗಳಿಗೆ ಸಹಾಯ ಮಾಡಬೇಕೆಂದು ಆಸ್ಪತ್ರೆ ನಿರ್ಮಿಸಿರುವುದು ದೊಡ್ಡ ವಿಷಯ. ಇದು ಸಮಾಜಕ್ಕೆ ದೊಡ್ಡ ಸಂದೇಶ ಎಂದು ಹೊಗಳಿದ್ದಾರೆ.
ಮನುಷ್ಯ ಹುಟ್ಟಿದ ಮೇಲೆ ಸಾಯಲೇ ಬೇಕು. ಹುಟ್ಟು ಸಾವಿನ ನಡುವೆ ಸಾಧನೆ ಮಾಡಬೇಕು. ಲೀಲಾವತಿಯವರ ಸಾಧನೆ ಹಾಗೂ ಸಾರ್ಥಕ ಜೀವನ ನಮಗೆಲ್ಲರಿಗೂ ಆದರ್ಶ. ಲೀಲಾವತಿ ಅಮ್ಮನವರನ್ನು ಎಲ್ಲಾ ತರಹದ ಗೌರವ ನೀಡಿ ಕಳುಹಿಸಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದು ಹೇಳಿದರು.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…