ರಾಜ್ಯ

ಡಿಕೆಶಿ ಸದ್ಗುರು ಕಾರ್ಯಕ್ರಮದಲ್ಲಿ ಭಾಗಿ; ಅನಗತ್ಯ ಚರ್ಚೆ ಬೇಡ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ಇಂದು ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಮಹಾಕುಂಭಮೇಳಕ್ಕೆ ಹೋಗಿದ್ದು, ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾದ ತಕ್ಷಣ ಬಿಜೆಪಿ ಸೇರುತ್ತಾರೆ ಎನ್ನುವುದೆಲ್ಲ ಸುಳ್ಳು ಇದರ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದು ಹೇಳಿದರು.

ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಆದ ಕಾರಣ ಈ ತರಹದ ವಿವಾದಗಳನ್ನು ಎಬ್ಬಿಸುತ್ತಾರೆ. ಸ್ವಂತ ಸಾಮರ್ಥ್ಯದಿಂದ ಯಾವತ್ತಾದರೂ ಬಿಜೆಪಿ ಅಧಿಕಾರಕ್ಕೆ ಬಂದಿದ್ದಾರಾ. ಹೋದ ಸಲ 17 ಏಕನಾಥ ಶಿಂಧೆಗಳನ್ನು ಕರೆದುಕೊಂಡು ಹೋಗಿದ್ರಲ್ಲಾ. ಈ ಸಲ ಅದು ಸಾಧ್ಯವಿಲ್ಲ ಎಂದರು.

ಬಿಜೆಪಿಯವರೂ ಯಾರನ್ನಾದರೂ ದ್ವೇಷಿಸಿಕೊಳ್ಳಲಿ, ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಮೋದಿ, ಖರ್ಗೆ ಅಕ್ಕಪಕ್ಕ ಫೋಟೋ ಇರುತ್ತೆ ಹಾಗಂತ ಮೋದಿ ಕಾಂಗ್ರೆಸ್‌ ಸೇರುತ್ತಾರೆ ಅನ್ನೋಕ್ಕಾಗತ್ತಾ ಎಂದು ತಿರುಗೇಟು ನೀಡಿದರು.

ಡಿಕೆ ಶಿವಕುಮಾರ್‌ ಸಿಎಂ ಆಗಬೇಕು ಎಂಬ ಮಾಜಿ ಸಂಸದ ಸುರೇಶ್‌ ಅವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲರಿಗೂ ಅವರ ಕುಟುಂಬದವರು ದೊಡ್ಡ ಹುದ್ದೆಗೇರಬೇಕು ಎನ್ನುವ ಹಂಬಲ ಇರುತ್ತದೆ. ನಮ್ಮ ಕುಟಂಬದವರನ್ನು ಕೇಳಿದ್ರೂ ಅದನ್ನೇ ಹೇಳುತ್ತಾರೆ. ಆದರೆ, ಅಂತಿಮವಾಗಿ ಇದರ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

7 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

7 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

7 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

7 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

7 hours ago