ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ ಹೇಳಿದ್ದಾರೆ.
ಕೇವಲ ಬೆಂಗಳೂರಿಗೆ ಸೀಮಿತವಾಗದೆ, ಎಲ್ಲಾ ಸಚಿವರು ಮತ್ತು ಶಾಸಕರು ತಮ್ಮ ವ್ಯಾಪ್ತಿಯ ಪ್ರತಿ ಜಿಲ್ಲೆಯಲ್ಲೂ ಕಡ್ಡಾಯವಾಗಿ ಪ್ರವಾಸ ಮಾಡಿ, ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆದೇಶಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಎಸ್ಐಆರ್ ವಿಚಾರದಲ್ಲಿ ದೊಡ್ಡ ಸಮಸ್ಯೆಯಿದೆ, ಇದನ್ನು ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಎಚ್ಚರಿಸಿರುವ ಸಿಎಂ, ಚುನಾವಣಾ ವ್ಯವಸ್ಥೆಯ ಈ ಪ್ರಮುಖ ಪ್ರಕ್ರಿಯೆಯ ಕಡೆಗೆ ನಾಯಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದ್ದಾರೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…