The Prime Minister, Shri Narendra Modi during his departing from KSRPTC Helipad, in Belagavi, Karnataka on November 13, 2016. The Union Minister for Chemicals & Fertilizers and Parliamentary Affairs, Shri Ananth Kumar is also seen.
ಬೆಳಗಾವಿ : ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಬಹಳ ವೀಕ್ ಮನುಷ್ಯ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಾನೆ. ಇಷ್ಟು ದಿನ ನಾನು ಸುಮ್ಮನಿದ್ದೆ, ಈಗ ಸೀರಿಯಸ್ ಆಗಿ ತೆಗೆದುಕೊಂಡಿದ್ದೇನೆ. ಸರ್ಕಾರ ನಮ್ಮ ಅರ್ಜಿ ನೆಗ್ಲೆಟ್ ಮಾಡಿದ್ರೆ, ಹೈಕೋರ್ಟ್, ಸುಪ್ರೀಂ ಕೋರ್ಟ್ ಹೋಗುತ್ತೇನೆ ಎಂದರು. ಇದೇ ವೇಳೆ ‘ಆಪರೇಷನ್ ಕಮಲ ಮಾಡುತ್ತಿಲ್ಲ, ಮಾಡುವುದಿಲ್ಲ. ಜನರನ್ನ ನಾವು ಕರೆದುಕೊಂಡು ಬರಲು ಹೇಗೆ ಸಾಧ್ಯ. ರಮೇಶ್ ಜಾರಕಿಹೊಳಿ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದರು.
ಅಸ್ಸಾಂ, ಗುಹಾವಟಿ ಮೂಲಕ ನನಗೆ ಕರೆ ಬರುತ್ತಿವೆ. ಟೆರರಿಸ್ಟ್ ಲಿಂಕ್ ಮಾಡಿ ನನ್ನನ್ನು ಅರೆಸ್ಟ್ ಮಾಡಿಸುವ ಹಂತಕ್ಕೆ ಹೋಗುತ್ತಾನೆ. ಅದಕ್ಕೆ ನನ್ನ ಪೋನ್ನಲ್ಲಿ ಇಂಟರ್ನೆಟ್ ಇಟ್ಟಿಲ್ಲ. ದುಬೈ, ಯುಎಇ ಕಡೆಯಿಂದಲೂ ಪೋನ್ ಬರುತ್ತಿವೆ. ನನಗೆ ಬಹಳ ಟಾರ್ಚರ್ ಕೊಟ್ಟಿದ್ದಾರೆ, ಬೇರೆ ಯಾರಾದರೂ ಆಗಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಅವನ ವಿರುದ್ಧ ಸಾಕ್ಷಿಗಳಿದ್ದು, ತನಿಖೆಯನ್ನು ಸಿಬಿಐಗೆ ಕೊಟ್ಟರೆ ಒದಗಿಸುತ್ತೇನೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿರುವ ಆಡಿಯೋ ನನ್ನ ಬಳಿ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಡಿ ಕೇಸ್ನಲ್ಲಿ ಕಾರು ಚಾಲಕ ಪರಶಿವಮೂರ್ತಿಯನ್ನು ಏಕೆ ವಿಚಾರಣೆಗೆ ಒಳಪಡಿಸಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಯಾಕೆ ವಿಚಾರಣೆ ಮಾಡಲಿಲ್ಲ. ನನ್ನ ಮಾತಿನಿಂದ ಭಾರತೀಯ ಜನತಾ ಪಕ್ಷಕ್ಕೆ ಮುಜುಗರ ಆಗೋದು ಬೇಡ, ಪರೋಕ್ಷವಾಗಿ ಬಿಜೆಪಿ ನಾಯಕರು ಸಿಡಿ ಕೇಸ್ನಲ್ಲಿ ಇದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ನಾಲ್ಕು ವರ್ಷಗಳಿಂದ ಅಪಮಾನ ಸಹಿಸಿಕೊಂಡಿದ್ದೇನೆ. ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಂತ್ಯವಾದ್ರೆ ಒಳ್ಳೆಯದು, ಡಿ.ಕೆ.ಶಿವಕುಮಾರ್ ಸಿಡಿ ಫ್ಯಾಕ್ಟರಿ ಬಂದ್ ಆಗಬೇಕಂದ್ರೆ ಸಿಬಿಐಗೆ ವಹಿಸಬೇಕು ಎಂದರು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…