ಬೆಂಗಳೂರು : ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಅವರಿಗೆ ಬೆಂಬಲ ಕೊಡೋದಾದ್ರೆ ಕೊಡಲಿ ಎಂದು ಗೃಹ ಸಚಿವ ಜಿ ಪರಮೇಶ್ವರ್ ಲೇವಡಿ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗೋದಾದ್ರೆ ಜೆಡಿಎಸ್ ಶಾಸಕರು ಬೆಂಬಲ ಕೊಡೋಕೆ ರೆಡಿ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಬೆಂಬಲ ಕೊಡಲಿ. ಅದು ಒಳ್ಳೆಯದು ಅಲ್ಲವಾ? ಕುಮಾರಸ್ವಾಮಿ ಬೆಂಬಲ ಕೊಡುತ್ತಾರೆ ಅಂದರೆ ಒಳ್ಳೆಯದೇ. ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅಲ್ಲಿಂದ ನಮಗೆ ಬೆಂಬಲ ಕೊಡುತ್ತಾರೆ ಅಂದರೆ ಒಳ್ಳೆಯದು ಎಂದು ವ್ಯಂಗ್ಯವಾಡಿದರು.
ಪರಮೇಶ್ವರ್ ಸಿಎಂ ಆಗೋಕೆ ಬೆಂಬಲ ಕೊಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇನ್ನು ಮುಂದೆ ಸಿಎಂ ವಿಚಾರವಾಗಿ ನನ್ನನ್ನು ಯಾರೂ ಪ್ರಶ್ನೆ ಕೇಳಬೇಡಿ. ಸಿಎಂ ವಿಚಾರವಾಗಿ ನಾನೇನು ಹೇಳುವುದಿಲ್ಲ. ಮುಖ್ಯಮಂತ್ರಿ ವಿಚಾರವಾಗಿ ಇನ್ನು ಮುಂದೆ ಪ್ರತಿಕ್ರಿಯೆ ಕೊಡಲ್ಲ ಎಂದರು.
ಡಿಕೆ ಶಿವಕುಮಾರ್ಗೆ ಬೆಂಬಲ ಕೊಡುವ ಮೂಲಕ ಕುಮಾರಸ್ವಾಮಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ಅದಕ್ಕೆ ಡಿಕೆ ಶಿವಕುಮಾರ್ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ. ಆದ್ದರಿಂದ ನಾನೇನು ಹೇಳುವುದಿಲ್ಲ. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಜನಗಳಿಗೆ ನಾವು ಕೊಟ್ಟ ಭರವಸೆಯನ್ನು ಚಾಚು ತಪ್ಪದೆ ಈಡೇರಿಸುತ್ತಿದ್ದೇವೆ. ಜನ ಸಂತೋಷದಿಂದ ಇದ್ದಾರೆ. ನಮಗೆ ಕಾರ್ಯಕ್ರಮ ಕೊಟ್ಟರು. ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಬಡ ಜನರು ಸಂತೋಷವಾಗಿ ಇದ್ದಾರೆ. ಬೇರೆಯವರ ಹೇಳಿಕೆಗಳು ಅಪ್ರಸ್ತುತ. ಬೇರೆಯವರ ಹೇಳಿಕೆ ಅಷ್ಟೇನು ಜಾಸ್ತಿ ಎಫೆಕ್ಟ್ ಆಗಲ್ಲ ಎಂದು ಕುಮಾರಸ್ವಾಮಿ ಹೇಳಿಕೆಗೆ ಪರಮೇಶ್ವರ್ ತಿರುಗೇಟು ನೀಡಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…