ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಜನಸ್ಪಂದನಾ ಕಾರ್ಯಕ್ರಮ ನಡೆಸೋದಕ್ಕೆ ನಿರ್ಧಾರ ಕೈಗೊಂಡಿದ್ದಾರೆ.
ಈ ಕುರಿತಂತೆ ಇಂದು ಬೆಂಗಳೂರಲ್ಲಿ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿದ್ದಾರೆ.
ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಬಿಡಬ್ಲೂಎಸ್ ಎಸ್ ಬಿ, ಬಿಡಿಎ, ಬೆಸ್ಕಾಂ, ಸಂಚಾರಿ ವಿಭಾಗದ ಪೊಲೀಸರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.
ಇಂದಿನ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ನಡೆಸೋದಕ್ಕೆ ನಿರ್ಧಾರ ಕೈಗೊಂಡಿರುವಂತ ಜನಸ್ಪಂದನಾ ಕಾರ್ಯಕ್ರಮದ ರೂಪು ರೇಷೆಗಳ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ.
ಈ ಸಭೆಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರಲ್ಲಿ ಜನಸ್ಪಂದನಾ ಕಾರ್ಯಕ್ರಮದ ದಿನಾಂಕ ಕೂಡ ಘೋಷಣೆಯಾಗಲಿದೆ.
ಅಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜನರ ಸಮಸ್ಯೆಯನ್ನು ಅವರು ಆಲಿಸಲಿದ್ದಾರೆ. ಅಲ್ಲದೇ ಸ್ಥಳದಲ್ಲೇ ಪರಿಹಾರವನ್ನು ಕೈಗೊಳ್ಳೋದಕ್ಕೆ ಅಧಿಕಾರಿಗಳಿಗೆ ಸೂಚಿಸಲಿದ್ದಾರೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…