ಬೆಂಗಳೂರು : ಜನರು ಬಯಸಿದ್ದೇ ಆದಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ʼಜನ ಏನು ತೀರ್ಮಾನ ಮಾಡ್ತಾರೆ ಅದಕ್ಕೆ ತಲೆ ಬಾಗುತ್ತೇವೆ. ಅವರು ಸೂಚನೆ ಕೊಟ್ರೆ ಅದರಂತೆ ಪಕ್ಷ ನಡೆಯಲಿದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡ್ತೇನೆ. ನನ್ನನ್ನು ಜನ ತಿರಸ್ಕರಿಸಿದ್ದಾರೆ, ಸೋತು ಒಂದು ತಿಂಗಳು ಆಗಿಲ್ಲ. ಆಗಲೇ ಇನ್ನೊಂದು ಚುನಾವಣೆ ಎಂದರೆ ಜನ ನಗುತ್ತಾರೆ ಎಂದರು.
ಬೇರೆಯವರು ಕೆಲಸ ಮಾಡಲಿ ನಾವು ಸಹಕಾರ ಕೋಡೋಣ. ಮೊದಲಿಂದಲೂ ಚನ್ನಪಟ್ಟಣದಲ್ಲಿ ಒಡನಾಟವಿದೆ. ಲೋಕಸಭೆಯಲ್ಲಿ ಒಳ್ಳೆಯ ಮತ ನೀಡಿದ್ದಾರೆ. ಶಾಸಕರು ಇಲ್ಲದ ಸಂದರ್ಭದಲ್ಲಿ ಸರ್ಕಾರ ಅಭ್ಯರ್ಥಿ ಮಾಡಬೇಕು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಲವಾಗಿದೆ ಎಂದರು
ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಉಪ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ಚನ್ನಪಟ್ಟಣದ ಜನ ಯಾರನ್ನು ಬಯಸುತ್ತಾರೋ ಅವರು ಅಭ್ಯರ್ಥಿಯಾಗುತ್ತಾರೆ. ರಾಮನಗರ ನಮ್ಮ ಸ್ವಂತ ಜಿಲ್ಲೆ, ಡಿಕೆಶಿಗೆ ಪಕ್ಷದ ಅಧ್ಯಕ್ಷರಾಗಿ ಡಿಸಿಎಂ ಆಗಿ ಅವರ ಮೇಲೆ ಜವಾಬ್ದಾರಿ ಇದೆ. ಉಪಚುನಾವಣೆ ಬರುವುದರಿಂದ ಆ ಕ್ಷೇತ್ರದಲ್ಲಿ ಶಾಸಕರಿಲ್ಲ. ಹಾಗಾಗಿ ಅಲ್ಲಿಯ ಕಾರ್ಯಕರ್ತರು ಸಾಕಷ್ಟು ಅಹವಾಲು ಕೊಡ್ತಾ ಇದ್ದಾರೆ. ಹಾಗಾಗಿ ಡಿಸಿಎಂ ಭೇಟಿ ಕೊಡ್ತಾ ಇದ್ದಾರೆ ಎಂದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…