ಬೆಂಗಳೂರು : ತಮ್ಮ ರಕ್ಷಣೆಗಾಗಿ ಬೇರೆಯವರ ವಿರುದ್ಧ ಆರೋಪ ಮಾಡುವುದು ಜೆಡಿಎಸ್ ನಾಯಕರಿಗೆ ಅಭ್ಯಾಸವಾಗಿದೆ ಎಂದು ಸೂರಜ್ ರೇವಣ್ಣ ವಿರುದ್ಧದ ಆರೋಪದ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇದೆ ಎಂಬ ಆರೋಪಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್ , ದೇವೇಗೌಡರ ಕುಟುಂಬ, ಮಾಜಿ ಪ್ರಧಾನಿಗಳ ಕುಟುಂಬ. ಅವರ ಬಗ್ಗೆ ನೀವು ಯಾರು ಮಾತನಾಡಬಾರದು. ನಾವು ಮಾತಾಡಿದ್ರೆ ತಪ್ಪು ಆಗುತ್ತದೆ. ರಾಜ್ಯದ ಜನ ಗಮನಿಸುತ್ತಾರೆ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಇದೇ ವೇಳೆ ಇದರ ಹಿಂದೆ ಷಡ್ಯಂತ್ರ ಇದೆ ಎಂಬ ರೇವಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಏನಕ್ಕೆ ಹೇಳಿದ್ದಾರೆ, ಯಾರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹೇಳಿದ್ದಾರೋ ಗೊತ್ತಿಲ್ಲ. ಅವರ ದೃಷ್ಟಿಕೋನಗಳು ಬಹುಶಃ ಅವರ ರಕ್ಷಣೆಗೆ ಬೇರೆಯವರ ಮೇಲೆ ಹೇಳೋದು ಅಭ್ಯಾಸ ಆಗಿದೆ. ಬೇರೆಯವರನ್ನ ಬೊಟ್ಟು ಮಾಡಿ ತೋರಿಸಿ, ಬೇರೆಯವರನ್ನ ಇದಕ್ಕೆ ಎಳೆದುಕೊಂಡು ರಕ್ಷಣೆ ಪಡೆದುಕೊಳ್ಳುವ ಕೆಲಸವಿದು ಎಂದು ಟಾಂಗ್ ಕೊಟ್ಟಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…