ರಾಜ್ಯ

ಕರೂರು ಕಾಲ್ತುಳಿತ ದುರಂತ ಪ್ರಕರಣ ನಡೆಯಲು ಡಿಎಂಕೆ ಸರ್ಕಾರವೇ ನೇರ ಕಾರಣ: ಆರ್.‌ಅಶೋಕ್‌ ಆರೋಪ

ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆತಂಕ ಹೊರಹಾಕಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ. ದುರ್ಘಟನೆಯಲ್ಲಿ ಚಿಕ್ಕ ಮಕ್ಕಳೂ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ಹೇಳಿದರು.

ಇದನ್ನೂ ಓದಿ:-ಕಾಲ್ತುಳಿತ ದುರಂತಕ್ಕೆ ತಮಿಳುನಾಡು ಸರ್ಕಾರವೇ ಕಾರಣ: ನಟ ವಿಜಯ್‌ ಗಂಭೀರ ಆರೋಪ

ಕರೂರು ದುರಂತ ಸಾರ್ವಜನಿಕರಿಗೆ ದೊಡ್ಡ ದಿಗ್ಬ್ರಾಂತಿ ತಂದಿದೆ. ಡಿಎಂಕೆ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡು ವಿಜಯ್‌ ತಲೆಗೆ ಪ್ರಕರಣ ಕಟ್ಟುತ್ತಿದೆ. ಅವರು ಸ್ಥಳ ಕೇಳಿದ್ದೆಲ್ಲ? ಅಲ್ಲಿನ ಸರ್ಕಾರ ಅನುಮತಿ ಕೊಟ್ಟಿದ್ದೆಲ್ಲ? ವಿಜಯ್‌ ಬಂದು ರ್ಯಾಲಿ ಮಾಡಿದ್ರು, ಹೋದ್ರು. ಅವರದ್ದೂ ತಪ್ಪಿದೆ. ವಿಜಯ್‌ ಕ್ಷಮೆ ಕೇಳಿಲ್ಲ. ಆಸ್ಪತ್ರೆಗೆ ಹೋಗಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪಾತ್ರವೇ ದೊಡ್ಡದು. ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ. ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ. ಕಾನೂನು ಸುವ್ಯವಸ್ಥೆ ಕಾಪಾಡಿಲ್ಲ. ಜನರ ಸಾವಿಗೆ ನೇರ ಕಾರಣ ಡಿಎಂಕೆ ಸರ್ಕಾರ. ಈ ದುರಂತ ಪ್ರಕರಣವನ್ನು ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

4 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

4 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

4 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

4 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

4 hours ago