r ashok
ಬೆಂಗಳೂರು : ತಮಿಳುನಾಡಿದ ಕರೂರುನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದ ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ. ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಸರ್ಕಾರದಿಂದ ನಡೆದಿದ್ದ ಆರ್ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ಘಟನೆಯಿಂದಲೇ ನಾವೆಲ್ಲರೂ ದುಃಖಕ್ಕೊಳಗಾಗಿದ್ದೆವು. ತಮಿಳುನಾಡಿನಲ್ಲಿ ನಡೆದಿರುವ ದುರ್ಘಟನೆ ಇದಕ್ಕಿಂತಲೂ ದೊಡ್ಡದಾಗಿದೆ ಎಂದರು.
ಇದನ್ನೂ ಓದಿ:-ಪೊಲೀಸ್ ನೇಮಕ ವಯೋಮಿತಿ ಹೆಚ್ಚಳದ ಸುಳಿವು ನೀಡಿದ ಪರಮೇಶ್ವರ್
ತಮಿಳುನಾಡಿನ ಡಿಎಂಕೆ ಸರ್ಕಾರ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. ಡಿಎಂಕೆ ಸರ್ಕಾರ 10 ಸಾವಿರ ಜನರಿಗೆ ಅನುಮತಿ ನೀಡಿದೆ. ಆದರೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಲ್ಲ. ಈ ಹಿಂದೆಯೇ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದ್ದರೂ, ಅದನ್ನು ಸರ್ಕಾರ ಧಿಕ್ಕರಿಸಿದೆ. ಈ ಅನಾಹುತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದರು.
ನಟ ವಿಜಯ್ ಕೂಡಲೇ ಕ್ಷಮಾಪಣೆ ಕೇಳಿ, ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಅದನ್ನು ವಿಜಯ್ ಮಾಡಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಮೂರ್ತಿಯ ಸಮಿತಿಗೆ ತನಿಖೆಗೆ ನೀಡಬೇಕೆಂದು ಕರ್ನಾಟಕದ ಬಿಜೆಪಿ ಘಟಕ ಆಗ್ರಹಿಸುತ್ತಿದೆ ಎಂದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…