r ashok
ಬೆಂಗಳೂರು : ತಮಿಳುನಾಡಿದ ಕರೂರುನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದ ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ. ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಸರ್ಕಾರದಿಂದ ನಡೆದಿದ್ದ ಆರ್ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ಘಟನೆಯಿಂದಲೇ ನಾವೆಲ್ಲರೂ ದುಃಖಕ್ಕೊಳಗಾಗಿದ್ದೆವು. ತಮಿಳುನಾಡಿನಲ್ಲಿ ನಡೆದಿರುವ ದುರ್ಘಟನೆ ಇದಕ್ಕಿಂತಲೂ ದೊಡ್ಡದಾಗಿದೆ ಎಂದರು.
ಇದನ್ನೂ ಓದಿ:-ಪೊಲೀಸ್ ನೇಮಕ ವಯೋಮಿತಿ ಹೆಚ್ಚಳದ ಸುಳಿವು ನೀಡಿದ ಪರಮೇಶ್ವರ್
ತಮಿಳುನಾಡಿನ ಡಿಎಂಕೆ ಸರ್ಕಾರ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. ಡಿಎಂಕೆ ಸರ್ಕಾರ 10 ಸಾವಿರ ಜನರಿಗೆ ಅನುಮತಿ ನೀಡಿದೆ. ಆದರೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಲ್ಲ. ಈ ಹಿಂದೆಯೇ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದ್ದರೂ, ಅದನ್ನು ಸರ್ಕಾರ ಧಿಕ್ಕರಿಸಿದೆ. ಈ ಅನಾಹುತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದರು.
ನಟ ವಿಜಯ್ ಕೂಡಲೇ ಕ್ಷಮಾಪಣೆ ಕೇಳಿ, ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಅದನ್ನು ವಿಜಯ್ ಮಾಡಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಮೂರ್ತಿಯ ಸಮಿತಿಗೆ ತನಿಖೆಗೆ ನೀಡಬೇಕೆಂದು ಕರ್ನಾಟಕದ ಬಿಜೆಪಿ ಘಟಕ ಆಗ್ರಹಿಸುತ್ತಿದೆ ಎಂದರು.
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…