r ashok
ಬೆಂಗಳೂರು : ತಮಿಳುನಾಡಿದ ಕರೂರುನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದ ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ. ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಸರ್ಕಾರದಿಂದ ನಡೆದಿದ್ದ ಆರ್ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ಘಟನೆಯಿಂದಲೇ ನಾವೆಲ್ಲರೂ ದುಃಖಕ್ಕೊಳಗಾಗಿದ್ದೆವು. ತಮಿಳುನಾಡಿನಲ್ಲಿ ನಡೆದಿರುವ ದುರ್ಘಟನೆ ಇದಕ್ಕಿಂತಲೂ ದೊಡ್ಡದಾಗಿದೆ ಎಂದರು.
ಇದನ್ನೂ ಓದಿ:-ಪೊಲೀಸ್ ನೇಮಕ ವಯೋಮಿತಿ ಹೆಚ್ಚಳದ ಸುಳಿವು ನೀಡಿದ ಪರಮೇಶ್ವರ್
ತಮಿಳುನಾಡಿನ ಡಿಎಂಕೆ ಸರ್ಕಾರ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. ಡಿಎಂಕೆ ಸರ್ಕಾರ 10 ಸಾವಿರ ಜನರಿಗೆ ಅನುಮತಿ ನೀಡಿದೆ. ಆದರೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಲ್ಲ. ಈ ಹಿಂದೆಯೇ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದ್ದರೂ, ಅದನ್ನು ಸರ್ಕಾರ ಧಿಕ್ಕರಿಸಿದೆ. ಈ ಅನಾಹುತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದರು.
ನಟ ವಿಜಯ್ ಕೂಡಲೇ ಕ್ಷಮಾಪಣೆ ಕೇಳಿ, ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಅದನ್ನು ವಿಜಯ್ ಮಾಡಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಮೂರ್ತಿಯ ಸಮಿತಿಗೆ ತನಿಖೆಗೆ ನೀಡಬೇಕೆಂದು ಕರ್ನಾಟಕದ ಬಿಜೆಪಿ ಘಟಕ ಆಗ್ರಹಿಸುತ್ತಿದೆ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…